Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿಗೆ 'ಅಧಿಕಾರದ ಅಮಲು' ಹೇಳಿಕೆ:...

ಬಿಜೆಪಿಗೆ 'ಅಧಿಕಾರದ ಅಮಲು' ಹೇಳಿಕೆ: ಬಿಜೆಪಿ ಮಿತ್ರಪಕ್ಷ ಎಸ್‍ಬಿಎಸ್‍ಪಿ ಸರದಿ

ವಾರ್ತಾಭಾರತಿವಾರ್ತಾಭಾರತಿ19 March 2018 1:38 PM IST
share
ಬಿಜೆಪಿಗೆ ಅಧಿಕಾರದ ಅಮಲು ಹೇಳಿಕೆ: ಬಿಜೆಪಿ ಮಿತ್ರಪಕ್ಷ ಎಸ್‍ಬಿಎಸ್‍ಪಿ ಸರದಿ

ಹೊಸದಿಲ್ಲಿ, ಮಾ.19: ಕೇಂದ್ರ ಸರಕಾರದ ವಿರುದ್ಧ ಟಿಡಿಪಿ ಆಕ್ರೋಶ ವ್ಯಕ್ತಪಡಿಸಿ ಮೈತ್ರಿ ಮುರಿದುಕೊಂಡ ಬೆನ್ನಿಗೇ ಬಿಜೆಪಿಯ ಮಿತ್ರ ಪಕ್ಷ ಸುಹೇಲ್ ದೇವ್ ಭಾರತೀಯ ಸಮಾಜ ಪಕ್ಷ ಬಿಜೆಪಿಗೆ ಅಧಿಕಾರದ ಅಮಲೇರಿದೆ ಎನ್ನುವ ಹೇಳಿಕೆ ನೀಡಿದೆ. ಅಷ್ಟೇ ಅಲ್ಲದೆ ಕೇಂದ್ರ ಸರಕಾರ ಬಡವರನ್ನು, ಅಲ್ಪಸಂಖ್ಯಾತರನ್ನು ಹಾಗೂ ದಲಿತರನ್ನು ತನ್ನ ಅಭಿವೃದ್ಧಿ ಅಜೆಂಡಾದಲ್ಲಿ ನಿರ್ಲಕ್ಷ್ಯಿಸಿದೆ ಎಂದು ಈ ಪಕ್ಷ ಬಿಜೆಪಿಯ ಇನ್ನೊಂದು ಮೈತ್ರಿ ಪಕ್ಷ ಲೋಕ ಜನಶಕ್ತಿ ಪಾರ್ಟಿಯ ಜತೆ ಸೇರಿ ಆರೋಪಿಸಿದೆ. ಮೋದಿ ಸರಕಾರಕ್ಕೆ ಅಧಿಕಾರದ ಅಮಲೇರಿದೆ ಎಂದು ವಿಪಕ್ಷ ಕಾಂಗ್ರೆಸ್ ಟೀಕಿಸಿದ ಬೆನ್ನಲ್ಲೇ  ಎಸ್‍ಬಿಎಸ್‍ಪಿ ಹೇಳಿಕೆ ನೀಡಿದೆ.

ಸುಹೇಲ್ ದೇವ್ ಭಾರತೀಯ ಸಮಾಜ ಪಕ್ಷದ ಅಧ್ಯಕ್ಷರಿಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರೊಡನೆ ಭೇಟಿಗೆ ಅವಕಾಶ ನೀಡದೇ ಇದ್ದಲ್ಲಿ ಉತ್ತರ ಪ್ರದೇಶದ 10 ಸ್ಥಾನಗಳಿಗೆ ನಡೆಯುವ ರಾಜ್ಯಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿಯೂ ಬೆದರಿಕೆಯೊಡ್ಡಿದೆ. ಎಂಟು ಅಭ್ಯರ್ಥಿಗಳನ್ನು ಮೇಲ್ಮನೆಗೆ ಆರಿಸಲು ಬಿಜೆಪಿಗೆ ಅಗತ್ಯ ಸದಸ್ಯರ ಬಲವಿದೆಯಾದರೂ ಒಂಬತ್ತನೇ ಅಭ್ಯರ್ಥಿಯ ಆಯ್ಕೆಗೆ ಎಸ್‍ಬಿಎಸ್‍ಪಿಗೆ ಉತ್ತರ ಪ್ರದೇಶದ 403 ಸದಸ್ಯರ ವಿಧಾನಸಭೆಯಲ್ಲಿ 4 ಶಾಸಕರಿರುವುದರಿಂದ ಅವರ ಮತಗಳು ನಿರ್ಣಾಯಕವಾಗಲಿವೆ.

ಉತ್ತರ ಪ್ರದೇಶ ಸರಕಾರ ಕೇವಲ ದೇವಸ್ಥಾನಗಳ ಬಗ್ಗೆ ಮಾತ್ರ ಯೋಚಿಸುತ್ತಿದೆಯೇ ವಿನಃ ಬಡವರ ಕಲ್ಯಾಣದ ಬಗ್ಗೆ ಅದು ಚಿಂತಿತವಾಗಿಲ್ಲ ಎಂದು  ಉತ್ತರ ಪ್ರದೇಶದ ಸಚಿವರೂ ಆಗಿರುವ ಎಸ್‍ಬಿಎಸ್‍ಪಿ ಅಧ್ಯಕ್ಷ ಒ ಪಿ ರಾಜಭರ್ಮ್ ತಿಳಿಸಿದ್ದಾರೆ.

ಬಿಜೆಪಿ ತನ್ನ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ನಿಜಾರ್ಥದಲ್ಲಿ ಜಾರಿಗೊಳಿಸಬೇಕಿದೆ ಎಂದು ಇತ್ತೀಚೆಗೆ ಎಲ್‍ಜೆಪಿ ಅಧ್ಯಕ್ಷ ರಾಮ್ ವಿಲಾಸ್ ಪಾಸ್ವಾನ್ ತಿಳಿಸಿದ್ದರು. ಈ ಬಗ್ಗೆ ಬಿಜೆಪಿ ಪ್ರತಿಕ್ರಿಯಿಸದೇ ಇದ್ದರೂ ರಾಜಭರ್ಮ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದೆ.

"ಅವರು ನಮ್ಮ ಮಿತ್ರ ಪಕ್ಷಕ್ಕೆ ಸೇರಿದವರು ಹಾಗೂ ನಮ್ಮ ಸಚಿವರಾಗಿದ್ದಾರೆ. ಅವರಿಗೇನೇ ತಕರಾರು ಇದ್ದರೂ ಸಚಿವ ಸಂಪುಟದ ಮುಂದೆ ಹೇಳಿಕೊಳ್ಳಬೇಕೇ ವಿನಹ ಸಾರ್ವಜನಿಕರ ಮುಂದಲ್ಲ'' ಎಂದು ಉತ್ತರ ಪ್ರದೇಶ ಸಚಿವ ಸಿದ್ಧಾರ್ಥ್ ನಾಥ್ ಸಿಂಗ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X