Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾನು ವೈದ್ಯನಾಗಿ, ತಂದೆಯಾಗಿ,...

ನಾನು ವೈದ್ಯನಾಗಿ, ತಂದೆಯಾಗಿ, ಜವಾಬ್ದಾರಿಯುತ ನಾಗರಿಕನಾಗಿ ಮಕ್ಕಳ ಜೀವ ಉಳಿಸಲು ಪ್ರಯತ್ನಿಸಿದೆ

ಜೈಲಿನಲ್ಲಿ ಡಾ.ಕಫೀಲ್ ಖಾನ್ ಬರೆದ ಪತ್ರ ಬಿಡುಗಡೆಗೊಳಿಸಿದ ಪತ್ನಿ

ವಾರ್ತಾಭಾರತಿವಾರ್ತಾಭಾರತಿ22 April 2018 3:13 PM IST
share
ನಾನು ವೈದ್ಯನಾಗಿ, ತಂದೆಯಾಗಿ, ಜವಾಬ್ದಾರಿಯುತ ನಾಗರಿಕನಾಗಿ ಮಕ್ಕಳ ಜೀವ ಉಳಿಸಲು ಪ್ರಯತ್ನಿಸಿದೆ

ಹೊಸದಿಲ್ಲಿ, ಎ.22: "ನಾನು ನಿಜವಾಗಿಯೂ ತಪ್ಪೆಸಗಿದ್ದೇನೆಯೇ ಎಂಬ ಪ್ರಶ್ನೆಯನ್ನು ಕೆಲವೊಮ್ಮೆ ನನಗೆ ನಾನೇ ಕೇಳಿಕೊಳ್ಳುತ್ತೇನೆ. ತಕ್ಷಣ ಹೃದಯಾಂತರಾಳದಿಂದ ಬರುವ ಉತ್ತರ ಇಲ್ಲ, ಇಲ್ಲ, ಎನ್ನುವುದು"... ಇದು ಗೋರಖ್‍ಪುರ ದುರಂತದಲ್ಲಿ ಹಲವು ಮಕ್ಕಳ ಪ್ರಾಣ ಉಳಿಸಿ ಇದೀಗ ಜೈಲು ಪಾಲಾಗಿರುವ ಡಾ.ಕಫೀಲ್ ಖಾನ್ ಅವರ ಪತ್ರ.

ಗೋರಖ್‍ಪುರ ದುರಂತದ ಮೊದಲ ದಿನವಾದ 2017ರ ಆಗಸ್ಟ್ ನಿಂದೀಚೆಗೆ ಡಾ.ಖಾನ್ ಜೈಲಿನಲ್ಲಿದ್ದಾರೆ. ಅವರ ಜಾಮೀನು ಅರ್ಜಿಯ ವಿಚಾರಣೆ ಇದುವರೆಗೆ ಒಂದು ದಿನವೂ ನಡೆದಿಲ್ಲ. ತಾನು ನಿರಪರಾಧಿ ಎಂದು ಕಫೀಲ್ ಖಾನ್ ಪತ್ರ ಬರೆದಿದ್ದು, "ಉನ್ನತ ಮಟ್ಟದ ಆಡಳಿತಾತ್ಮಕ ವೈಫಲ್ಯತೆಗೆ ನಾನು ಸೇರಿ ಇತರರನ್ನು ಬಲಿಪಶು ಮಾಡಲಾಗಿದೆ" ಎಂದಿದ್ದಾರೆ.

ಈ ಬಗ್ಗೆ ಎಪ್ರಿಲ್ 18ರಂದು ಕಫೀಲ್ ಖಾನ್ ಜೈಲಿನಿಂದಲೇ ಪತ್ರ ಬರೆದಿದ್ದು, ಅವರ ಪತ್ನಿ ಶಬಿಸ್ತಾ ಪತ್ರಿಕಾಗೋಷ್ಟಿಯಲ್ಲಿ ಅದನ್ನು ಬಿಡುಗಡೆಗೊಳಿಸಿದ್ದಾರೆ. 2017 ಆಗಸ್ಟ್ 10ರಂದು ತಾನು ರಜೆಯಲ್ಲಿದ್ದೆ. ಆಸ್ಪತ್ರೆಯಲ್ಲಿ ಮಕ್ಕಳ ಸಾವಿನ ಬಗ್ಗೆ ಸುದ್ದಿ ತಿಳಿದ ತಕ್ಷಣ ನಾನು ಆಸ್ಪತ್ರೆಗೆ ಧಾವಿಸಿದೆ. "ಆ ದುರದೃಷ್ಟಕರ ರಾತ್ರಿಯ ಬಗ್ಗೆ ನನಗೆ ವಾಟ್ಸ್ಯಾಪ್ ಸಂದೇಶ ಲಭಿಸಿದ ಕೂಡಲೇ ಸ್ಥಳಕ್ಕೆ ತೆರಳಿದೆ. ನಾನು ವೈದ್ಯನಾಗಿ, ಒಬ್ಬ ತಂದೆಯಾಗಿ, ಭಾರತದ ಜವಾಬ್ದಾರಿಯುತ ನಾಗರಿಕನಾಗಿ ಅಪಾಯದಲ್ಲಿದ್ದ ಪ್ರತಿ ಜೀವವನ್ನು ರಕ್ಷಿಸಲು ಪ್ರಯತ್ನಿಸಿದೆ" ಎಂದವರು ಪತ್ರದಲ್ಲಿ ತಿಳಿಸಿದ್ದಾರೆ. 

ಪುಷ್ಪಾ ಸೇಲ್ಸ್ 14 ಬಾರಿ ಪತ್ರ ಕಳುಹಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಗೋರಖ್ ಪುರದ ಡಿಎಂ, ಡಿಜಿಎಂಇ ತಪ್ಪಿತಸ್ಥರು. ಇದು ಉನ್ನತ ಮಟ್ಟದ ಆಡಳಿತಾತ್ಮಕ ವೈಫಲ್ಯ. ಅವರು ನಮ್ಮನ್ನು ಬಲಿಪಶುಗಳನ್ನಾಗಿ ಮಾಡಿ ಕಂಬಿ ಹಿಂದೆ ತಳ್ಳಿದ್ದಾರೆ ಎಂದು ಕಫೀಲ್ ಖಾನ್ ತಿಳಿಸಿದ್ದಾರೆ.

ಆದಿತ್ಯನಾಥ್ ತನ್ನನ್ನು ಭೇಟಿಯಾದ ನಂತರ ಬದುಕು ತಲೆಕೆಳಗಾಯಿತು. "ಡಾ. ಕಫೀಲ್ ನೀವಾ ಎಂದು ಅವರು ಕೇಳಿದರು. ನೀವು ಸಿಲಿಂಡರ್ ವ್ಯವಸ್ಥೆ ಮಾಡಿದ್ದೀರಾ?... ನಾನು ಹೌದು ಎಂದೆ. ಕೂಡಲೇ ಅವರಿಗೆ ಕೋಪ ಬಂದಿತ್ತು. ಸಿಲಿಂಡರ್ ತಲುಪಿಸುವ ಮೂಲಕ ನೀವು ಹೀರೋ ಆಗುತ್ತೀರಿ ಎಂದು ಭಾವಿಸಿದ್ದೀರಾ? ಎಂದವರು ಪ್ರಶ್ನಿಸಿದರು. ಈ ಘಟನೆ ಮಾಧ್ಯಮಗಳಲ್ಲಿ ವರದಿಯಾಗಿದ್ದಕ್ಕೆ ಅವರು ಆಕ್ರೋಶ ವ್ಯಕ್ತಪಡಿಸಿದ್ದರು" ಎಂದು ಕಫೀಲ್ ಖಾನ್ ಬರೆದಿದ್ದಾರೆ.

"ನನ್ನ ಪತಿ ಯಾವುದೇ ಅಪರಾಧ ಎಸಗಿಲ್ಲ. ಅವರಿಗೆ ಬೇಕಿದ್ದರೆ ತುರ್ತು ಸಮಯದಲ್ಲೂ ಮನೆಯಲ್ಲೇ ಇರಬಹುದಿತ್ತು. ಹಲವು ಸಂದರ್ಭಗಳಲ್ಲಿ ಮಾಸ್ಕ್, ಗ್ಲೌಸ್ ಗಳಿಗೆ ನನ್ನ ಪತಿಯೇ ಹಣ ಪಾವತಿಸಿದ್ದರು" ಎಂದು ಕಫೀಲ್ ಖಾನ್ ಪತ್ನಿ ಶಬಿಸ್ತಾ ಹೇಳಿದರು.

ಗೋರಖ್‍ಪುರ ಬಿಆರ್ ಡಿ ವೈದ್ಯಕೀಯ ಕಾಲೇಜು ದುರಂತಕ್ಕೆ ಸಂಬಂಧಿಸಿ ಕಫೀಲ್ ಖಾನ್ ರನ್ನು ಬಂಧಿಸಲಾಗಿತ್ತು. ಖಾನ್ ಆ ದಿನ ವಾಸ್ತವವಾಗಿ ರಜೆಯಲ್ಲಿದ್ದರು. ಆದರೂ ಸುದ್ದಿ ತಿಳಿಯುತ್ತಿದ್ದಂತೆ ಅಕ್ಕಪಕ್ಕದ ಆಸ್ಪತ್ರೆಗಳಿಂದ ಮತ್ತು ಕಂಪನಿಗಳಿಂದ ಆಮ್ಲಜನಕ ಸಿಲಿಂಡರ್ ಒಟ್ಟುಗೂಡಿಸಲು ಆರಂಭಿಸಿದ್ದರು. ರೋಗಿಗಳನ್ನು ಬದುಕಿಸಲು ಇನ್ನಿಲ್ಲದ ಪ್ರಯತ್ನ ಮಾಡಿದ್ದರು.

ಜೈಲಿನಲ್ಲಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಪತ್ನಿ ಡಾ.ಸಬಿಷ್ಟಾ ಖಾನ್ ನ್ಯಾಯಕ್ಕಾಗಿ ಮೊರೆ ಹೋಗಿದ್ದಾರೆ. ಹೃದ್ರೋಗಿಯಾಗಿರುವ ಡಾ.ಖಾನ್‍ಗೆ ಅಧಿಕ ರಕ್ತ ಒತ್ತಡ ಸಮಸ್ಯೆಯೂ ಇದೆ. ಖಿನ್ನತೆ ಹಾಗೂ ಭೀತಿಯಿಂದ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಡುತ್ತಿದೆ. ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಖಾನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಂತೆ ಕುಟುಂಬ ಒತ್ತಡ ತಂದಿತ್ತು. ಆದರೆ ಇದಕ್ಕೂ ವಿಳಂಬ ಮಾಡಲಾಯಿತು. ಇಸಿಜಿ ಹಾಗೂ ರಕ್ತ ಪರೀಕ್ಷೆ ನಡೆದಿದ್ದು, ಇನ್ನೂ ಕೆಲ ತಪಾಸಣೆಗಳು ಆಗಬೇಕಿವೆ. ಆದರೆ ವೈದ್ಯಕೀಯ ತಪಾಸಣೆ ವರದಿಯ ಬಗ್ಗೆ ನಮಗೆ ಯಾವ ಮಾಹಿತಿಯನ್ನೂ ನೀಡಿಲ್ಲ ಎಂದು ಅವರು ಆಪಾದಿಸುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X