ರಾಂಚಿ ಆಸ್ಪತ್ರೆಗೆ ದಾಖಲಾದ ಲಾಲು
ರಾಂಚಿ, ಮೇ 1: ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮಂಗಳವಾರ ರಾಂಚಿಯ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈಯನ್ಸ್ (RIMS) ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಿವಿಧ ಕಾಯಿಲೆಗಳಿಗಾಗಿ ಕಳೆದ ಒಂದು ತಿಂಗಳಿನಿಂದ ದಿಲ್ಲಿಯ ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲಾಲು ಪ್ರಸಾದ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಸೋಮವಾರ ಏಮ್ಸ್ ನಿಂದ ಬಿಡುಗಡೆಯಾಗಿದ್ದರೂ, ಎದೆ ನೋವು ಕಾಣಿಸಿಕೊಂಡ ಕಾರಣದಿಂದಾಗಿ ಇದೀಗ ರಾಂಚಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಹುಕೋಟಿ ರೂ.ಗಳ ಮೇವು ಹಗರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಲಾಲು ಪ್ರಸಾದ್ ಅವರು ಬೆಳಗ್ಗೆ 10 ಗಂಟೆಗೆ ರಾಜಧಾನಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬಿಗಿ ಭದ್ರತೆಯಲ್ಲಿ ಆಗಮಿಸಿದರು. ರಾಂಚಿಗೆ ಆಗಮಿಸಿದ ಲಾಲು ಪ್ರಸಾದ್ ಯಾದವ್ ಅವರನ್ನು ತಕ್ಷಣ ರಾಂಚಿಯ ಆಸ್ಪತ್ರೆಗೆ ದಾಖಲಿಸಲಾಯಿತು. ರಾಂಚಿಯ ರಿಮ್ಸ್ ಆಸ್ಪತ್ರೆಯ ಹೃದ್ರೋಗ ಚಿಕಿತ್ಸಾ ವಿಭಾಗದಲ್ಲಿ ಲಾಲು ಪಡೆಯುತ್ತಿದ್ದಾರೆ. ಡಾ. ಉಮೇಶ್ ನೇತೃತ್ವದ ಐವರು ವೈದ್ಯರುಗಳ ತಂಡ ಚಿಕಿತ್ಸೆ ನೀಡುತ್ತಿದೆ
Next Story