ಎಐಸಿಸಿ ಆಂಧ್ರ ಉಸ್ತುವಾರಿಯಾಗಿ ಉಮ್ಮನ್ ಚಾಂಡಿ ಆಯ್ಕೆ
ಹೊಸದಿಲ್ಲಿ, ಮೇ 27: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರವಿವಾರದಂದು ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿಯವರನ್ನು ಆಂಧ್ರಪ್ರದೇಶದ ಎಐಸಿಸಿಯ ನೂತನ ಉಸ್ತುವಾರಿಯನ್ನಾಗಿ ನೇಮಕ ಮಾಡಿದ್ದಾರೆ. ಈವರೆಗೆ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಎಐಸಿಸಿ ಆಂಧ್ರ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಪಕ್ಷದ ವಕ್ತಾರ ಗೌರವ್ ಗೊಗೊಯ್ರನ್ನು ಪಶ್ಚಿಮ ಬಂಗಾಳ ಹಾಗೂ ಅಂಡಮಾನ್ ಮತ್ತು ನಿಕೊಬಾರ್ ದ್ವೀಪಗಳ ಎಐಸಿಸಿ ಉಸ್ತುವಾರಿಯಾಗಿ ಆಯ್ಕೆ ಮಾಡಲಾಗಿದೆ. ಗೌರವ್ ಅಸ್ಸಾಮ್ನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಅವರ ಪುತ್ರ. ತಮ್ಮ ಸ್ಥಾನದಿಂದ ಕೆಳಗಳಿಯುತ್ತಿರುವ ದಿಗ್ವಿಜಯ್ ಸಿಂಗ್ ಮತ್ತು ಸಿ.ಪಿ ಜೋಶಿ ಅವರ ಕಾರ್ಯವೈಖರಿ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೊಟ್, ಪಕ್ಷಕ್ಕೆ ನಿಮ್ಮಿಬ್ಬರಿಂದ ಬಹಳಷ್ಟು ಪ್ರಯೋಜನವಾಗಿದೆ ಎಂದು ತಿಳಿಸಿದ್ದಾರೆ.
Next Story