ಅಭಿಮನ್ಯು ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಬಂಧನ
ಕೊಚ್ಚಿ, ಜು.18: ಮಹಾರಾಜಾಸ್ ಕಾಲೇಜಿನ ವಿದ್ಯಾರ್ಥಿ ಅಭಿಮನ್ಯು ಕೊಲೆ ಪ್ರಕರಣದ ಪ್ರಮುಖ ಆರೋಪಿ ವಡುದಲ ಎಂಬಲ್ಲಿನ ಮುಹಮ್ಮದ್ ಎಂಬಾತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈವರೆಗೂ ಭೂಗತನಾಗಿದ್ದ ಈತ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಮಹಾರಾಜಾಸ್ ಕಾಲೇಜು ಘಟಕದ ಅಧ್ಯಕ್ಷನಾಗಿದ್ದಾನೆ ಎಂದು ಆರೋಪಿಸಲಾಗಿದೆ. ಈತನಲ್ಲದೆ ಇನ್ನೂ ನಾಲ್ವರನ್ನು ಪೊಲೀಸರು ಇಂದು ಕಸ್ಟಡಿಗೆ ಪಡೆದಿದ್ದಾರೆ.
ಮುಹಮ್ಮದ್ ನನ್ನು ಕೇರಳ-ಕರ್ನಾಟಕ ಗಡಿ ಪ್ರದೇಶದಿಂದ ಬಂಧಿಸಲಾಗಿದೆ ಎನ್ನುವ ಮಾಹಿತಿಯೂ ಇದೆ. ಎರಡು ದಿನಗಳಿಂದ ಮುಹಮ್ಮದ್ ಪೊಲೀಸ್ ಕಸ್ಟಡಿಯಲ್ಲೇ ಇದ್ದಾನೆ ಎಂದೂ ವರದಿಯಾಗಿದ್ದವು.
Next Story