Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದ ಅತ್ಯಂತ ಬಡ ಹಾಗೂ ಶ್ರೀಮಂತ ಸಂಸದರು...

ದೇಶದ ಅತ್ಯಂತ ಬಡ ಹಾಗೂ ಶ್ರೀಮಂತ ಸಂಸದರು ಯಾರು ಗೊತ್ತೇ?

ಸಂಸದರ ಶೈಕ್ಷಣಿಕ, ಆರ್ಥಿಕ ವಿವರ ಇಂತಿವೆ

ವಾರ್ತಾಭಾರತಿವಾರ್ತಾಭಾರತಿ4 April 2019 9:58 AM IST
share
ದೇಶದ ಅತ್ಯಂತ ಬಡ ಹಾಗೂ ಶ್ರೀಮಂತ ಸಂಸದರು ಯಾರು ಗೊತ್ತೇ?

ಹೊಸದಿಲ್ಲಿ, ಎ.4: ರಾಜಸ್ಥಾನದ ಸಿಕರ್ ಕ್ಷೇತ್ರದ ಸಂಸದ ಸುಮೇಧಾನಂದ ಸರಸ್ವತಿ, ದೇಶದ ಅತ್ಯಂತ ಬಡ ಸಂಸದ ಎನಿಸಿಕೊಂಡಿದ್ದಾರೆ. ಇವರ ಒಟ್ಟು ಆಸ್ತಿ ಮೌಲ್ಯ ಕೇವಲ 34,311 ರೂಪಾಯಿ. ಇನ್ನೊಂದೆಡೆ, ಒಂದೇ ವರ್ಷದಲ್ಲಿ 16.85 ಕೋಟಿ ರೂ. ಆದಾಯ ಹೊಂದಿರುವ ಆಂಧ್ರಪ್ರದೇಶದ ಗುಂಟೂರು ಕ್ಷೇತ್ರದ ಸಂಸದ ಜಯದೇವ್ ಗಲ್ಲಾ ಅತ್ಯಂತ ಶ್ರೀಮಂತ ಸಂಸದ.

521 ಸಂಸದರ ಪೈಕಿ 479 ಮಂದಿ ಕಳೆದ ಬಾರಿಯ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿತ್‌ಗಳನ್ನು ಎಡಿಆರ್ ವಿಶ್ಲೇಷಣೆಗೆ ಒಳಪಡಿಸಿದಾಗ ಇಂಥ ಕೆಲ ಕುತೂಹಲಕರ ಮಾಹಿತಿ ತಿಳಿದುಬಂದಿದೆ. ಒಬ್ಬ ಸಂಸದ ಅನಕ್ಷರಸ್ಥನಾಗಿದ್ದರೆ, ಆರು ಮಂದಿ ಐದನೇ ತರಗತಿವರೆಗೆ ಮಾತ್ರ ಓದಿದ್ದಾರೆ. ಎಂಟು ಮಂದಿ 8ನೇ ಕ್ಲಾಸ್ ಬಳಿಕ ಶಿಕ್ಷಣಕ್ಕೆ ಗುಡ್‌ಬೈ ಹೇಳಿದ್ದಾರೆ.

ಐದನೇ ತರಗತಿ ಬಳಿಕ ಶಾಲೆ ಬಿಟ್ಟ ಸಂಸದರೆಂದರೆ ಉತ್ತರ ಪ್ರದೇಶದ ಅಮ್ರೋಹಾ ಸಂಸದ ಕನ್ವರ್ ಸಿಂಗ್ ತನ್ವರ್ (ಬಿಜೆಪಿ), ದಾದ್ರಾ ಮತ್ತು ನಗರ ಹವೇಲಿ ಸಂಸದ ನಾತೂಭಾಯ್ ಜಿ. ಪಟೇಲ್ (ಬಿಜೆಪಿ), ಉತ್ತರ ಮುಂಬೈ ಸಂಸದ ಗೋಪಾಲ ಚಿನ್ನಯ್ಯ ಶೆಟ್ಟಿ (ಬಿಜೆಪಿ), ರಾಜಮಹಲ್ ಸಂಸದ ವಿಜಯಕುಮಾರ್ ಹಂಸದಾಕ್ (ಜೆಎಂಎಂ) ಮತ್ತು ರಾಬರ್ಟ್ಸ್‌ಗಂಜ್ ಸಂಸದ ಚೋಟೆಲಾಲ್ (ಬಿಜೆಪಿ). ಝಾನ್ಸಿ ಸಂಸದೆ ಮತ್ತು ಕೇಂದ್ರ ಸಚಿವೆ ಉಮಾಭಾರತಿ ಕೂಡ ಈ ಪಟ್ಟಿಯಲ್ಲಿದ್ದಾರೆ.

ಆಂಧ್ರ ಪ್ರದೇಶದ ಅನಕಪಲ್ಲೆ ಕ್ಷೇತ್ರದ ಮುತ್ತಂಸೆಟ್ಟಿ ಶ್ರೀನಿವಾಸ ರಾವ್ (47) ಅನಕ್ಷರಸ್ಥ ಎಂದು ಘೋಷಿಸಿಕೊಂಡಿದ್ದಾರೆ. ಇವರ ವಾರ್ಷಿಕ ಆದಾಯ 75 ಲಕ್ಷ ರೂಪಾಯಿ. ಐದನೇ ತರಗತಿವರೆಗೆ ಓದಿರುವ ಸಂಸದರ ಪೈಕಿ ತನ್ವರ್ ಅವರ ವಾರ್ಷಿಕ ಆದಾಯ 8.15 ಕೋಟಿ ರೂಪಾಯಿ.

ಒಟ್ಟು 42 ಸಂಸದರು ಹೈಸ್ಕೂಲ್ ಶಿಕ್ಷಣ ಪೂರ್ಣಗೊಳಿಸಿದ್ದರೆ, 48 ಸಂಸದರು 8ನೇ ತರಗತಿಯವರೆಗೆ ಓದಿದ್ದಾರೆ. 92 ಮಂದಿ ಪದವೀಧರರು, 134 ಮಂದಿ ಸ್ನಾತಕೋತ್ತರ ಪದವೀಧರರು ಮತ್ತು 30 ಮಂದಿ ಡಾಕ್ಟರೇಟ್ ಪದವಿ ಪಡೆದವರು ಸಂಸದರಾಗಿದ್ದಾರೆ. ಕುತೂಹಲದ ಅಂಶವೆಂದರೆ ಪದವೀಧರ ಸಂಸದರ ವಾರ್ಷಿಕ ಆದಾಯ ಸರಾಸರಿ 41 ಲಕ್ಷ ಆಗಿದ್ದರೆ, 5ನೇ ತರಗತಿವರೆಗೆ ಓದಿರುವ ಸಂಸದರ ವಾರ್ಷಿಕ ಆದಾಯ ಸರಾಸರಿ 1.41 ಕೋಟಿ!

share
ವಾರ್ತಾಭಾರತಿ
ವಾರ್ತಾಭಾರತಿ
Next Story
X