ಪಶ್ಚಿಮಬಂಗಾಳದ ಜಾದವ್ಪುರ್ನಲ್ಲಿ ರ್ಯಾಲಿ ನಡೆಸಲು ಅಮಿತ್ ಶಾಗೆ ಅನುಮತಿ ನಿರಾಕರಣೆ
ಹೊಸದಿಲ್ಲಿ, ಮೇ 13: ಪಶ್ಚಿಮಬಂಗಾಳದ ಜಾದವ್ಪುರ ಜಿಲ್ಲೆಯಲ್ಲಿ ರ್ಯಾಲಿ ನಡೆಸಲು ಬಿಜೆಪಿ ಮುಖ್ಯಸ್ಥ ಅಮಿತ್ ಶಾಗೆ ಅನುಮತಿ ನಿರಾಕರಿಸಲಾಗಿದೆ ಎಂದು ಪಕ್ಷ ಮೂಲಗಳು ಸೋಮವಾರ ತಿಳಿಸಿದೆ.
ಶಾ ಹೆಲಿಕಾಪ್ಟರ್ ಇಳಿಯಲು ಅನುಮತಿ ನೀಡಲಾಗಿತ್ತು. ಆ ಬಳಿಕ ಜಿಲ್ಲಾಡಳಿತ ಅನುಮತಿ ನಿರಾಕರಿಸಿತ್ತು ಎಂದು ಮೂಲಗಳು ತಿಳಿಸಿವೆ.
ಶಾಗೆ ಅನುಮತಿ ನಿರಾಕರಿಸುತ್ತಿರುವುದು ಇದೇ ಮೊದಲಲ್ಲ. ಈ ವರ್ಷದ ಜನವರಿಯಲ್ಲಿ ಮಾಲ್ಡಾ ಜಲ್ಲೆಯಲ್ಲಿ ರ್ಯಾಲಿ ನಡೆಸಲು ಆಗಮಿಸಿದ್ದ ಬಿಜೆಪಿ ಅಧ್ಯಕ್ಷ ಶಾ ಅವರ ಹೆಲಿಕಾಪ್ಟರ್ ಕೆಳಗೆ ಇಳಿಯಲು ಅನುಮತಿ ನಿರಾಕರಿಸಲಾಗಿತ್ತು. ಆದರೆ ಕೊನೆ ಗಳಿಗೆಯಲ್ಲಿ ಸಾರ್ವಜನಿಕ ರ್ಯಾಲಿ ನಡೆಸಲು ಜಿಲ್ಲಾಡಳಿತ ಅನುಮತಿ ನೀಡಿತ್ತು.
ಫೆಬ್ರವರಿಯಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ರ ಹೆಲಿಕಾಪ್ಟರ್ನ್ನು ಪಶ್ಚಿಮಬಂಗಾಳದಲ್ಲಿ ಇಳಿಯಲು ಅನುಮತಿ ನಿರಾಕರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಆದಿತ್ಯನಾಥ್ ಜಾರ್ಖಂಡ್ನ ಬೊಕಾರೊದಲ್ಲಿ ಹೆಲಿಕಾಪ್ಟರ್ನಿಂದ ಇಳಿದು ರಸ್ತೆ ಮಾರ್ಗದಲ್ಲಿ ಪುರುಲಿಯಾ ಜಿಲ್ಲೆಗೆ ತೆರಳಿ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದರು.