ಹೈಕೋರ್ಟ್ ಮೆಟ್ಟಿಲೇರಿದ ಪರಾಜಿತ ಆಪ್ ಲೋಕಸಭಾ ಅಭ್ಯರ್ಥಿ ರಾಘವ್
ಹೊಸದಿಲ್ಲಿ , ಜು.4: ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಛಡ್ಡಾ ಅವರು ಇತ್ತೀಚಿನ ಲೋಕಸಭಾ ಚುನಾವಣೆಯ ದಕ್ಷಿಣ ದಿಲ್ಲಿ ಕ್ಷೇತ್ರದ ಫಲಿತಾಂಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ದಕ್ಷಿಣ ದಿಲ್ಲಿಯಿಂದ ಆಪ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಾಘವ್ ಬಿಜೆಪಿಯ ರಮೇಶ್ ಬಿಧುರಿ ವಿರುದ್ಧ ಸೋತಿದ್ದರು. ಆದರೆ ರಮೇಶ್ ತಮ್ಮ ವಿರುದ್ಧ ಇದ್ದ ಕ್ರಿಮಿನಲ್ ಪ್ರಕರಣವನ್ನು ಮುಚ್ಚಿಟ್ಟು ಸ್ಪರ್ಧಿಸಿರುವುದರಿಂದ ಅವರನ್ನು ಅನರ್ಹಗೊಳಿಸಿ ತನ್ನನ್ನು ವಿಜೇತ ಎಂದು ಘೋಷಿಸಬೇಕು ಎಂದು ರಾಘವ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
ರಮೇಶ್ ವಿರುದ್ಧ ಬಿಹಾರದಲ್ಲಿ ಮಾನಹಾನಿಕರ ಭಾಷಣ ಮಾಡಿದ್ದಕ್ಕೆ ಎಫ್ ಐ ಆರ್ ದಾಖಲಾಗಿದೆ ಎಂದು ರಾಘವ್ ದೂರಿದ್ದಾರೆ. ರಮೇಶ್ ತಮ್ಮ ಚುನಾವಣಾ ಅಫಿಡವಿಟ್ ನಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದೂ ರಾಘವ್ ಆರೋಪಿಸಿದ್ದಾರೆ.
Next Story