ತುಮಕೂರಿನ ಸಿದ್ಧಗಂಗಾ ಮಠಕ್ಕೆ ಪ್ರಧಾನಿ ಮೋದಿ ಭೇಟಿ
ಬೆಂಗಳೂರು, ಜ.2: ತಮಕೂರಿಗೆ ತೆರಳುವುದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ಮಧ್ಯಾಹ್ನ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದರು.
ಯಲಹಂಕದ ಏರ್ ಬೆಸ್ ಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಮುಖ್ಯ ಮಂತ್ರಿ ಬಿ.ಎಸ್ . ಯಡಿಯೂರಪ್ಪ ಶಾಲು ಹೊದಿಸಿ, ಹಾರಾರ್ಪಣೆಗೈದು, ಮೈಸೂರು ಪೇಟಾ ತೊಡಿಸುವ ಮೂಲಕ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಪ್ರಹ್ಲಾದ ಜೋಶಿ, ರಾಜ್ಯ ಸಚಿವ ಆರ್.ಅಶೋಕ್, ಬೆಂಗಳೂರು ಜಿಲ್ಲಾ ಪಂಚಾಯತ್ ಅಧ್ಯಕ್ಷರು, ರಾಜ್ಯ ಪೋಲಿಸ್ ಮಹಾ ನಿರ್ದೇಶಕಿ ನೀಲಮಣಿ ರಾಜು, ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಬೆಂಗಳೂರು ನಗರ ಜಿಲ್ಲಾಧಿಕಾರಿ, ಸರ್ಕಾರದ ಮುಖ್ಯಕಾರ್ಯದರ್ಶಿ ಉಪಸ್ಥಿತರಿದ್ದರು.
ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ವಾಯುಪಡೆಯ ಹೆಲಿಕಾಪ್ಟರ್ ನಲ್ಲಿ ತುಮಕೂರಿನತ್ತ ತೆರಳಿದರು. ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಾಥ್ ನೀಡಿದರು.
ತುಮಕೂರಿನ ವಿವಿ ಹೆಲಿಪ್ಯಾಡ್ ನಿಂದ ಕಾರ್ ನ ಮೂಲಕ ಸಿದ್ದಗಂಗಾ ಮಠಕ್ಕೆ ಮೋದಿ ತೆರಳಿದರು. ಪ್ರಧಾನಿ ಮೋದಿ ಸಾಗುವ ರಸ್ತೆಯಲ್ಲಿ ಬಿಗು ಭದ್ರತೆ ಮಾಡಲಾಗಿತ್ತು.