ಪೌರತ್ವ ಕಾಯ್ದೆ ವಿರುದ್ಧ ಒಗ್ಗಟ್ಟಾಗಿ: 11 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಪಿಣರಾಯಿ ವಿಜಯನ್
ತಿರುವನಂತಪುರಂ: ಪೌರತ್ವ ಕಾಯ್ದೆ ವಿರುದ್ಧ ಒಗ್ಗಟ್ಟಾಗುವಂತೆ ಆಗ್ರಹಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 11 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ಮಹಾರಾಷ್ಟ್ರ, ಪ.ಬಂಗಾಳ, ಬಿಹಾರ, ಜಾರ್ಖಂಡ್ ಮತ್ತು ಇತರ ಬಿಜೆಪಿಯೇತರ ರಾಜ್ಯ ಸರಕಾರಗಳಿಗೆ ಪತ್ರಗಳನ್ನು ಕಳುಹಿಸಲಾಗಿದೆ.
"ವಿವಿಧತೆಯಲ್ಲಿ ಏಕತೆಯಿದೆ ಎನ್ನುವುದು ನಮಗೆಲ್ಲರಿಗೂ ತಿಳಿದಿದೆ. ಹಿಂದಿನಿಂದಲೂ ಅದು ಉಳಿದುಕೊಂಡು ಬಂದಿದೆ. ದೇಶದ ಪ್ರಜಾಪ್ರಭುತ್ವವನ್ನು ಕಾಪಾಡುವಲ್ಲಿ ಸಮಾಜದ ಎಲ್ಲಾ ವರ್ಗದ ಜನರು ಒಗ್ಗೂಡಬೇಕು" ಎಂದು ಪತ್ರದಲ್ಲಿ ಬರೆಯಲಾಗಿದೆ.
ರಾಷ್ಟ್ರೀಯ ಜನಸಂಖ್ಯಾ ನೋಂದಣಿಗೆ ಸಂಬಂಧಿಸಿದ ಎಲ್ಲ ಚಟುವಟಿಕೆಗಳನ್ನು ತಡೆಯುವ ಮೂಲಕ ಜನರಲ್ಲಿಯ ಆತಂಕಗಳನ್ನು ನಿವಾರಿಸಲು ಕೇರಳವು ನಿರ್ಧರಿಸಿದೆ ಎಂದೂ ಅವರು ಹೇಳಿದ್ದಾರೆ.
Next Story