ಮಾ.20ಕ್ಕೆ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ
ದಿಲ್ಲಿಯ ಪಟಿಯಾಲ ಹೌಸ್ ಕೋರ್ಟ್ನಿಂದ ಡೆತ್ ವಾರಂಟ್
ಹೊಸದಿಲ್ಲಿ, ಮಾ.5: ನಿರ್ಭಯಾ ಗ್ಯಾಂಗ್ ರೇಪ್ ಹಾಗೂ ಹತ್ಯೆ ಪ್ರಕರಣದ ಹಂತಕರಿಗೆ ದಿಲ್ಲಿಯ ಪಟಿಯಾಲ ಹೌಸ್ ಕೋರ್ಟ್ ನಾಲ್ಕನೇ ಬಾರಿ ಡೆತ್ ವಾರಂಟ್ ಹೊರಡಿಸಿ ಆದೇಶಿಸಿದೆ.
ನಿರ್ಭಯಾ ಹಂತಕರಿಗೆ ಮಾ.20, ಬೆಳಗ್ಗೆ 5.30 ಗಂಟೆಗೆ ಗಲ್ಲು ಶಿಕ್ಷೆ ನೀಡಬೇಕೆಂದು ನ್ಯಾಯಾಲಯ ವಾರಂಟ್ ಹೊರಡಿಸಿದೆ.
ಪವನ್ ಗುಪ್ತಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ತಿರಸ್ಕರಿಸಿದ ಮರುದಿನವೇ ದಿಲ್ಲಿ ನ್ಯಾಯಾಲಯ ಡೆತ್ ವಾರಂಟ್ ನೀಡಿದೆ.
ಏಳು ವರ್ಷಗಳ ಹಿಂದೆ 23 ವಯಸ್ಸಿನ ವೈದ್ಯಕೀಯ ವಿದ್ಯಾರ್ಥಿನಿಯನ್ನು ನಾಲ್ವರು ದುಷ್ಕರ್ಮಿಗಳು ಅತ್ಯಾಚಾರ ನಡೆಸಿ ಭೀಕರ ಹತ್ಯೆಗೈದಿದ್ದರು.
Next Story