Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚೀನಿ ಕಂಪೆನಿಗೆ ನೀಡಿದ ಬಿಡ್...

ಚೀನಿ ಕಂಪೆನಿಗೆ ನೀಡಿದ ಬಿಡ್ ರದ್ದುಗೊಳಿಸಿ: ಮೋದಿ ಸರಕಾರಕ್ಕೆ ಆರೆಸ್ಸೆಸ್ ಅಂಗಸಂಸ್ಥೆಯ ಆಗ್ರಹ

ದಿಲ್ಲಿ-ಮೀರತ್ ಸುರಂಗ ಮಾರ್ಗ ಯೋಜನೆ

ವಾರ್ತಾಭಾರತಿವಾರ್ತಾಭಾರತಿ16 Jun 2020 4:46 PM IST
share
ಚೀನಿ ಕಂಪೆನಿಗೆ ನೀಡಿದ ಬಿಡ್ ರದ್ದುಗೊಳಿಸಿ: ಮೋದಿ ಸರಕಾರಕ್ಕೆ ಆರೆಸ್ಸೆಸ್ ಅಂಗಸಂಸ್ಥೆಯ ಆಗ್ರಹ

#ಕೇವಲ 44 ಕೋಟಿ ರೂ.ಗಳಿಗಾಗಿ ಎಲ್ & ಟಿಯ ಬಿಡ್ ತಿರಸ್ಕೃತ: ಟ್ವಿಟರಿಗರ ಆಕ್ರೋಶ

ಹೊಸದಿಲ್ಲಿ: ದಿಲ್ಲಿ- ಮೀರತ್ ಆರ್ ಆರ್ ಟಿಎಸ್ (ರೀಜನಲ್ ರ್ಯಾಪಿಡ್ ಟ್ರಾನ್ಸಿಟ್ ಸಿಸ್ಟಂ) ಯೋಜನೆಯ ಭಾಗವಾಗಿ ಸುರಂಗ ಮಾರ್ಗ ನಿರ್ಮಾಣಕ್ಕೆ ಅತ್ಯಂತ ಕನಿಷ್ಠ ದರದ ಬಿಡ್ ಸಲ್ಲಿಸಿರುವ ಚೀನೀ ಕಂಪೆನಿ ಶಾಂಘಾಯ್ ಟನಲ್ ಎಂಜಿನಿಯರಿಂಗ್ ಕಂಪೆನಿ ಲಿಮಿಟೆಡ್ ನ ಬಿಡ್ ರದ್ದುಪಡಿಸಬೇಕೆಂದು ಆರೆಸ್ಸೆಸ್ ಅಂಗಸಂಸ್ಥೆ ಸ್ವದೇಶಿ ಜಾಗರಣ್ ಮಂಚ್ ಆಗ್ರಹಿಸಿದೆ. ಭಾರತವನ್ನು ಸ್ವಾವಲಂಬಿ ದೇಶವನ್ನಾಗಿಸುವ ಕುರಿತಂತೆ ಸರಕಾರ ಗಂಭೀರವಾಗಿದ್ದರೆ ಈ ಬಿಡ್ ರದ್ದುಪಡಿಸಬೇಕೆಂದು ಮಂಚ್ ಹೇಳಿದೆ.

“ಸರಕಾರ ಆತ್ಮ ನಿರ್ಭರ್ ಭಾರತ್ ಎಂದು ಹೇಳುತ್ತಿದೆ. ಹೀಗಿರುವಾಗ ದೇಶೀಯ ಕಂಪೆನಿಗಳನ್ನು ಪ್ರೋತ್ಸಾಹಿಸಬೇಕಿರುವಾಗ ಸರಕಾರ ಚೀನೀ ಕಂಪೆನಿಗೆ ಹೇಗೆ ಗುತ್ತಿಗೆ ನೀಡಬಹುದು?” ಎಂದು ಸ್ವದೇಶಿ ಜಾಗರಣ್ ಮಂಚ್ ಪ್ರಶ್ನಿಸಿದೆ ಎಂದು ಅದರ ರಾಷ್ಟ್ರೀಯ ಸಹಸಂಚಾಲಕ ಅಶ್ವನಿ ಮಹಾಜನ್ ಹೇಳಿದ್ದಾರೆ.

ಚೀನೀ ಕಂಪೆನಿಗಳ ವಿಶ್ವಾಸಾರ್ಹತೆಯ ಪ್ರಶ್ನೆಯೂ ಇದೆ ಎಂದು ಹೇಳಿರುವ ಮಹಾಜನ್, “ಈ ಹಿಂದೆ ಭದ್ರತೆಯ ಕಾರಣಗಳಿಗಾಗಿ 5ಜಿ ಟ್ರಯಲ್‍ಗಳಿಗಾಗಿ ಹುವಾಯಿ ಕಂಪೆನಿಯ ಭಾಗವಹಿಸುವಿಕೆಯನ್ನು ವಿರೋಧಿಸಿದ್ದೆವು, ಈಗ ದೇಶೀಯ ಕಂಪೆನಿಗಳಿಗೆ ಉತ್ತೇಜನ ನೀಡಬೇಕೆಂದು ಬಯಸುತ್ತೇವೆ'' ಎಂದು ತಿಳಿಸಿದ್ದಾರೆ.

ನ್ಯಾಷನಲ್ ಕ್ಯಾಪಿಟಲ್ ರೀಜನ್ ಟ್ರಾನ್ಸ್‍ಪೋರ್ಟ್ ಕಾರ್ಪೊರೇಶನ್ ಈ ಭೂಗತ ಸಿವಿಲ್ ನಿರ್ಮಾಣ ಕಾಮಗಾರಿಗಾಗಿ  ಕಳೆದ ವರ್ಷದ ನವೆಂಬರ್ ತಿಂಗಳಲ್ಲಿ ತಾಂತ್ರಿಕ ಬಿಡ್ ಆಹ್ವಾನಿಸಿತ್ತು.

ಶಾಂಘಾಯ್ ಕಂಪೆನಿ ಹೊರತಾಗಿ ನಾಲ್ಕು ಇತರ ಕಂಪೆನಿಗಳು ತಾಂತ್ರಿಕ ಬಿಡ್‍ಗೆ ಅರ್ಹಗೊಂಡಿದ್ದರೆ, ಫೈನಾನ್ಶಿಯಲ್ ಬಿಡ್‍ನಲ್ಲಿ ಶಾಂಘಾಯ್ ಕಂಪೆನಿ ಕಡಿಮೆ ಮೊತ್ತದ ಬಿಡ್ಡರ್ ಆಗಿದ್ದರಿಂದ ಆಯ್ಕೆಯಾಗಿತ್ತು. ಈ ಯೋಜನೆಗೆ ಚೀನಾ ಕಂಪೆನಿ ಘೋಷಿಸಿದ ಬಿಡ್ ಮೊತ್ತ ರೂ 1,126 ಕೋಟಿ ಆಗಿದ್ದರೆ, ಎಲ್ & ಟಿ ರೂ  1,170 ಕೋಟಿ, ಗುಲೆರ್ ಮಾರ್ಕ್ ರೂ 1,326 ಕೋಟಿ, ಟಾಟಾ ಪ್ರಾಜೆಕ್ಟ್ಸ್ ರೂ 1,346 ಕೋಟಿ ಹಾಗೂ ಅಫ್ಕಾನ್ಸ್ ಇನ್‍ಫ್ರಾಸ್ಟ್ರಕ್ಚರ್  ರೂ 1,400 ಕೋಟಿಗೆ ಬಿಡ್ ಮೊತ್ತ ಉಲ್ಲೇಖಿಸಿತ್ತು.

ಮತ್ತೊಂದೆಡೆ ಭಾರತ ಮತ್ತು ಚೀನಾ ನಡುವೆ ಬಿಕ್ಕಟ್ಟು ಮುಂದುವರಿದಿರುವಂತೆಯೇ ಈ ಬಿಡ್ ಅನ್ನು ಚೀನಾ ದೇಶದ ಕಂಪೆನಿಗೆ ನೀಡಿರುವ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇಂತಹ ಪ್ರಮುಖ ಯೋಜನೆಗಳನ್ನು ಚೀನಾಗೆ ಬಿಟ್ಟುಕೊಡುವುದರ ಮೂಲಕ ದೇಶದ ಭದ್ರತೆಯ ಅಪಾಯವಿದೆ ಎಂದು ಟ್ವಿಟರಿಗರು ಅಭಿಪ್ರಾಯಿಸುತ್ತಿದ್ದಾರೆ. ಕೇವಲ 44 ಕೋಟಿ ರೂ.ಗಳಿಗಾಗಿ ಎಲ್ & ಟಿಯ ಬಿಡ್ ಅನ್ನು ತಿರಸ್ಕರಿಸಲಾಗಿದೆ ಎಂದು ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X