ಹಾಥರಸ್ ಪ್ರಕರಣದ ಸಿಬಿಐ ತನಿಖೆಗೆ ಸೂರತ್ ವಕೀಲರ ಸಂಘ ಆಗ್ರಹ
ಸೂರತ್, ಅ. 2: ಉತ್ತರಪ್ರದೇಶದ ಹಾಥರಸ್ನಲ್ಲಿ 19 ವರ್ಷದ ದಲಿತ ಯುವತಿಯ ಅತ್ಯಾಚಾರ ಹಾಗೂ ಸಾವು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸೂರತ್ ಜಿಲ್ಲಾ ಮಹಿಳಾ ವಕೀಲರ ಸಮಿತಿ ಸದಸ್ಯರು (ಎಸ್ಡಿಎಲ್ಎಎಸಿಎಂ) ಸೂರತ್ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.
ಉತ್ತರಪ್ರದೇಶ ಸರಕಾರ ಹಾಗೂ ಪೊಲೀಸರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಕ್ರಮ ತೆಗೆದುಕೊಳ್ಳಬೇಕು. ಪ್ರಕರಣವನ್ನು ತ್ವರಿತ ನ್ಯಾಯಾಲಯ ವಿಚಾರಣೆ ನಡೆಸಬೇಕು, ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕು ಎಂದು ವಕೀಲರ ಸಂಘಟನೆ ಮನವಿಯಲ್ಲಿ ಆಗ್ರಹಿಸಿದೆ.
Next Story