ಪ್ರಚಾರಕ ಪಟ್ಟಿಯಿಂದ ಕಮಲನಾಥ್ ರನ್ನು ತೆಗೆದುಹಾಕುವ ಅಧಿಕಾರ ಚುನಾವಣಾ ಆಯೋಗಕ್ಕೆ ಇಲ್ಲ: ಸುಪ್ರೀಂಕೋರ್ಟ್
ಹೊಸದಿಲ್ಲಿ: ಮಧ್ಯಪ್ರದೇಶದಲ್ಲಿ ಉಪ ಚುನಾವಣೆಯ ಸ್ಟಾರ್ ಪ್ರಚಾರಕರಾಗಿರುವ ಕಾಂಗ್ರೆಸ್ ನ ಕಮಲನಾಥ್ ಅವರನ್ನು ಪಟ್ಟಿ ಯಿಂದ ತೆಗೆದುಹಾಕುವ ಚುನಾವಣಾ ಆಯೋಗದ ಆದೇಶಕ್ಕೆ ಸುಪ್ರೀಂಕೋರ್ಟ್ ಸೋಮವಾರ ತಡೆ ನೀಡಿದೆ.
ನಾವು ಚುನಾವಣಾ ಆಯೋಗದ ಆದೇಶಕ್ಕೆ ತಡೆ ನೀಡುತ್ತಿದ್ದೇವೆ. ಚುನಾವಣಾ ಆಯೋಗಕ್ಕೆ ಅಧಿಕಾರವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಹೇಳಿದ್ದಾರೆ.
ತಾರಾ ಪ್ರಚಾರಕ ಪಟ್ಟಿಯಿಂದ ಅಭ್ಯರ್ಥಿಯನ್ನು ತೆಗೆದುಹಾಕಲು ನಿಮಗೆ(ಚುನಾವಣಾ ಆಯೋಗ) ಅಧಿಕಾರ ಯಾರು ನೀಡಿದ್ದಾರೆ? ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲನಾಥ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ವೇಳೆ ಮುಖ್ಯ ನ್ಯಾಯಮೂರ್ತಿ ಬೋಬ್ಡೆ ಪ್ರಶ್ನಿಸಿದ್ದಾರೆ.
Next Story