ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಅರ್ನಬ್ ಗೋಸ್ವಾಮಿ
ಹೊಸದಿಲ್ಲಿ: ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ 2018ರಲ್ಲಿ ಅನ್ವಯ್ ನಾಯಕ್ ಅವರಿಗೆ ಆತ್ಹಹತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣದಲ್ಲಿ ತನಗೆ ಮಧ್ಯಂತರ ಜಾಮೀನು ನೀಡದ ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮಂಗಳವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಬಾಂಬೆ ಹೈಕೋರ್ಟ್ ಸೋಮವಾರ ಗೋಸ್ವಾಮಿಗೆ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದ್ದು, ಕ್ರಿಮಿನಲ್ ಕಾನೂನು ಪ್ರಕಾರ ಸೆಷನ್ಸ್ ನ್ಯಾಯಾಲಯದಲ್ಲಿ ಸಾಮಾನ್ಯ ಜಾಮೀನು ಸಲ್ಲಿಸಲು ಗೋಸ್ವಾಮಿ ಸ್ವತಂತ್ರರಿದ್ದಾರೆ ಎಂದು ಬಾಂಬೆ ಹೈಕೋರ್ಟ್ ಹೇಳಿತ್ತು. ಗೋಸ್ವಾಮಿ ಸೋಮವಾರವೇ ಅಲಿಬಾಗ್ ನ ಸೆಷನ್ಸ್ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು.
Next Story