ಟಿಎಂಸಿಗೆ ಮತ್ತೊಂದು ಆಘಾತ: ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ಶಾಸಕ
ಕೊಲ್ಕತ್ತಾ: ಹಿರಿಯ ತೃಣಮೂಲ ಕಾಂಗ್ರೆಸ್ ನಾಯಕ ಸುವೇಂದು ಅಧಿಕಾರಿ ರಾಜೀನಾಮೆ ನೀಡಿರುವ ಬೆನ್ನಲ್ಲೇ, ಉತ್ತರ ಬಂಗಾಳದ ಮತ್ತೊಬ್ಬ ಟಿಎಂಸಿ ಶಾಸಕ ಮಿಹಿರ್ ಗೋಸ್ವಾಮಿ ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ.
ಹೊಸದಿಲ್ಲಿಯ ಬಿಜೆಪಿ ಮುಖ್ಯ ಕಚೇರಿಗೆ ಆಗಮಿಸಿದ ಮಿಹಿರ್ ಗೋಸ್ವಾಮಿ ಅಧಿಕೃತವಾಗಿ ಬಿಜೆಪಿ ಪಕ್ಷ ಸೇರಿದರು. ಈ ಸಂದರ್ಭ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ, ಅರ್ಜುನ್ ಸಿಂಗ್, ನಿಸಿತ್ ಪ್ರಮಾಣಿಕ್ ಉಪಸ್ಥಿತರಿದ್ದರು.
Next Story