ಶುಕ್ರವಾರ ಸರ್ವ ಪಕ್ಷಗಳ ಸಭೆ ಕರೆದ ಪ್ರಧಾನಿ ಮೋದಿ
ಹೊಸದಿಲ್ಲಿ: ದೇಶದಲ್ಲಿನ ಕೊರೋನ ವೈರಸ್ ಪರಿಸ್ಥಿತಿಯ ಕುರಿತು ಚರ್ಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಸರ್ವಪಕ್ಷಗಳ ಸಭೆ ಕರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೊರೋನ ವೈರಸ್ಗೆ ಸಂಬಂಧಿಸಿ ಕೇಂದ್ರ ಸರಕಾರವು ಎರಡನೇ ಬಾರಿ ಸರ್ವಪಕ್ಷಗಳ ಸಭೆ ಕರೆದಿದೆ. ಸಾಂಕ್ರಾಮಿಕ ರೋಗ ದೇಶಕ್ಕೆ ಕಾಲಿಟ್ಟ ಬಳಿಕ 94 ಲಕ್ಷಕ್ಕೂ ಅಧಿಕ ಜನರಿಗೆ ಸೋಂಕು ತಗಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಆರೋಗ್ಯಸಚಿವ ಹರ್ಷವರ್ಧನ್ ಹಾಗೂ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.
Next Story