ಟ್ರ್ಯಾಕ್ಟರ್ ಮೂಲಕ ಬ್ಯಾರಿಕೇಡ್ ಗಳನ್ನು ತೆಗೆದುಹಾಕಿದ ರೈತರು
ಹೊಸದಿಲ್ಲಿ: ಕೇಂದ್ರ ಸರಕಾರದ ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ದಿಲ್ಲಿಯ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಕೇಂದ್ರದ ವಿರುದ್ಧ ಘೋಷಣೆಯನ್ನು ಮೊಳಗಿಸುತ್ತಿದ್ದಾರೆ. ಮಂಗಳವಾರ ಗಾಝಿಯಾಪುರ-ಗಾಝಿಯಾಬಾದ್ (ದಿಲ್ಲಿ-ಉತ್ತರಪ್ರದೇಶ)ಗಡಿ ಭಾಗದಲ್ಲಿ ಹಾಕಲಾಗಿರುವ ಬ್ಯಾರಿಕೇಡ್ ಗಳನ್ನು ತಮ್ಮ ಟ್ರ್ಯಾಕ್ಟರ್ ಮೂಲಕ ತೆರವುಗೊಳಿಸಿದ್ದಾರೆ.
ಗಡಿಭಾಗಗಳಲ್ಲಿ ಕಾಂಕ್ರೀಟ್ ಬ್ಯಾರಿಕೇಡ್ ಗಳನ್ನು ಹಾಕಲಾಗಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಇದೇ ವೇಳೆ ದಿಲ್ಲಿ ಪೊಲೀಸರು ಹರ್ಯಾಣಕ್ಕೆ ಹೊಂದಿಕೊಂಡಿರುವ ಸಿಂಘು ಹಾಗೂ ಟಿಕ್ರಿ ಗಡಿಗಳನ್ನು ಮುಚ್ಚಿದ್ದಾರೆ. ರೈತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಇತರ ಪ್ರದೇಶಗಳಲ್ಲಿ ತಪಾಸಣೆಗಳನ್ನು ಹೆಚ್ಚಿಸಿದ್ದಾರೆ.
Next Story