ಮಾನನಷ್ಟ ಮೊಕದ್ದಮೆ: ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ ಜಾವೇದ್ ಅಖ್ತರ್
ಮುಂಬೈ, ಡಿ. 3: ನಟಿ ಕಂಗನಾ ರಾಣಾವತ್ ವಿರುದ್ಧ ದಾಖಲಿಸಿದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ಬಾಲಿವುಡ್ ಗೀತೆ ರಚನೆಕಾರ ಜಾವೇದ್ ಅಖ್ತರ್ ಗುರುವಾರ ಇಲ್ಲಿನ ಮೆಟ್ರೋಪಾಲಿಟಿನ್ ನ್ಯಾಯಾಲಯದ ಮುಂದೆ ತನ್ನ ವಕೀಲರ ಮೂಲಕ ಹೇಳಿಕೆ ದಾಖಲಿಸಿದ್ದಾರೆ.
ದೂರದರ್ಶನ ಸಂದರ್ಶನವೊಂದರಲ್ಲಿ ತನ್ನ ವಿರುದ್ಧ ಆಧಾರ ರಹಿತ ಹಾಗೂ ಮಾನಹಾನಿಕರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಜಾವೇದ್ ಅಖ್ತರ್ ಕಳೆದ ತಿಂಗಳು ಕಂಗನಾ ರಾಣಾವತ್ ವಿರುದ್ಧ ಅಂಧೇರಿ ಮೆಟ್ರೋಪಾಲಿಟಿನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಕ್ರಿಮಿನಲ್ ದೂರು ದಾಖಲಿಸಿದ್ದರು. ಇದರ ಪ್ರಕ್ರಿಯೆಯ ಒಂದು ಭಾಗವಾಗಿ ಜಾವೇದ್ ಅಖ್ತರ್ ತನ್ನ ವಕೀಲರ ಮೂಲಕ ಹೇಳಿಕೆ ದಾಖಲಿಸಿದರು. ನ್ಯಾಯಾಲಯ ಈ ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ 19ಕ್ಕೆ ಮುಂದೂಡಿದೆ.
Next Story