ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಹಿಂಸಾಚಾರ: ದೇಶದ್ರೋಹದ ಪ್ರಕರಣ ದಾಖಲಿಸಿದ ದಿಲ್ಲಿ ಪೊಲೀಸರು
ಹೊಸದಿಲ್ಲಿ, ಜ. 27: ಗಣರಾಜ್ಯೋತ್ಸವದ ದಿನ ನಡೆದ ರೈತರ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿ ದಿಲ್ಲಿ ಪೊಲೀಸರು ದೇಶದ್ರೋಹದ ಪ್ರಕರಣ ದಾಖಲಿಸಿದ್ದಾರೆ.
ದಿಲ್ಲಿ ಹಿಂಸಾಚಾರಕ್ಕೆ ಸಂಬಂಧಿಸಿ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ ಈ ಘಟನೆಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಕೆಂಪು ಕೋಟೆ ಘಟನೆಗೆ ಸಂಬಂಧಿಸಿ ದಿಲ್ಲಿ ಪೊಲೀಸರು ಈ ಹಿಂದೆ ದಾಖಲಿಸಿದ್ದ ಎಫ್ಐಆರ್ನಲ್ಲಿ ನಟ ದೀಪ್ ಸಿಧು ಹಾಗೂ ಸಾಮಾಜಿಕ ಹೋರಾಟಗಾರನಾಗಿ ಪರಿವರ್ತನೆಯಾದ ಭೂಗತ ಪಾತಕಿ ಲಖಾ ಸಿಧಾನ ಹೆಸರನ್ನು ಉಲ್ಲೇಖಿಸಿದ್ದರು.
Next Story