ಪ್ರತಿಭಟನೆಯಲ್ಲಿ ಪಾಲ್ಗೊಂಡ ರೈತರಿಗೆ ಸಮನ್ಸ್ ನೀಡಿಲ್ಲ: ಸರಕಾರದ ಹೇಳಿಕೆ
ಹೊಸದಿಲ್ಲಿ, ಫೆ.10: ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ರೈತರಿಗೆ ರಾಷ್ಟೀಯ ತನಿಖಾ ದಳ(ಎನ್ಐಎ) ಸಮನ್ಸ್ ನೀಡಿಲ್ಲ ಎಂದು ಸರಕಾರ ಬುಧವಾರ ರಾಜ್ಯಸಭೆಯಲ್ಲಿ ಹೇಳಿದೆ.
ಈ ಬಗ್ಗೆ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹಾಗೂ ಇತರ ಇಬ್ಬರು ಸದಸ್ಯರು ರಾಜ್ಯಸಭೆಯಲ್ಲಿ ಪ್ರಶ್ನೆ ಕೇಳಿದ್ದರು. ಇದಕ್ಕೆ ಲಿಖಿತ ಉತ್ತರ ನೀಡಿದ ಗೃಹ ಇಲಾಖೆಯ ಸಹಾಯಕ ಸಚಿವ ಜಿ ಕಿಶನ್ ರೆಡ್ಡಿ ‘ ಇಲ್ಲ, ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ರೈತರಿಗೆ ತನಿಖಾ ದಳ ಸಮನ್ಸ್ ನೀಡಿಲ್ಲ ಎಂದು ಹೇಳಿದ್ದಾರೆ.
Next Story