ಲವ್ ಜಿಹಾದ್ ವಿರುದ್ಧದ ಕಾನೂನು ಪ್ರಮುಖ ಚುನಾವಣಾ ವಿಷಯ : ಕೇರಳ ಬಿಜೆಪಿ ಅಧ್ಯಕ್ಷ ಸುರೇಂದ್ರನ್
ಪಾಲಕ್ಕಾಡ್ : ಲವ್ಜಿಹಾದ್ ವಿರುದ್ಧದ ಕಾನೂನು ಕೇರಳದಲ್ಲಿ ಬಿಜೆಪಿಗೆ ಪ್ರಮುಖ ಚುನಾವಣಾ ವಿಷಯವಾಗಿದೆ ಎಂದು ಕೇರಳ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ಹೇಳಿದ್ದಾರೆ.
ಇತರ ಕೆಲ ರಾಜ್ಯಗಳಲ್ಲಿ ಜಾರಿಗೆ ತಂದಂತೆ ವಿವಾಹದ ಹೆಸರಿನಲ್ಲಿ ಬಲವಂತದ ಮತಾಂತರ ತಡೆಗೆ ಪಿಣರಾಯಿ ವಿಜಯನ್ ಸರ್ಕಾರ ಕಾನೂನು ಜಾರಿಗೊಳಿಸಬೇಕು ಎಂದು ಅವರು ಆಗ್ರಹಿಸಿದರು.
ಕೇರಳದಲ್ಲಿ ಕ್ರೈಸ್ತ ಸಮುದಾಯವನ್ನು ಗುರಿ ಮಾಡಲಾಗುತ್ತಿದೆ ಎಂಬ ವಿಷಯದ ಬಗ್ಗೆ ಆ ಸಮುದಾಯ ಹೆಚ್ಚು ಭೀತಿ ಹೊಂದಿದೆ. ಅದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಸರ್ಕಾರಗಳು ಈಗಾಗಲೇ ಧಾರ್ಮಿಕ ಸ್ವಾತಂತ್ರ್ಯ ಕಾನೂನುಗಳನ್ನು ಜಾರಿಗಳಿಸಿವೆ. ಕೇರಳದಲ್ಲಿ ಉತ್ತರ ಪ್ರದೇಶಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಲವ್ಜಿಹಾದ್ ನಡೆಯುತ್ತಿದೆ ಎಂದು ಅವರು ಹೇಳಿದರು.
Next Story