ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಅಧಿಕಾರಿ ಸ್ಪರ್ಧೆ
ನವದೆಹಲಿ: ಡಿಸೆಂಬರ್ನಲ್ಲಿ ಬಿಜೆಪಿಗೆ ಕಾಲಿಟ್ಟ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಒಂದು ಕಾಲದ ಬಲಗೈ ಬಂಟ ಸುವೇಂದು ಅಧಿಕಾರಿ, ಈ ತಿಂಗಳ ಕೊನೆಯಲ್ಲಿ ಪ್ರಾರಂಭವಾಗುವ ರಾಜ್ಯ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ವಿರುದ್ಧವೇ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಪಕ್ಷವು ಶನಿವಾರ ಘೋಷಣೆ ಮಾಡಿದೆ.
ತೃಣಮೂಲ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿ ಸೇರಿರುವ ಸುವೇಂದು ಅಧಿಕಾರಿಯ ಕ್ಷೇತ್ರದಿಂದ ಸ್ಪರ್ಧಿಸಿ, ಕೊಲ್ಕತ್ತಾದ ತನ್ನ ಭವಾನಿಪುರ ಕ್ಷೇತ್ರವನ್ನು ತ್ಯಜಿಸುವುದಾಗಿ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದರು. ಸುವೇಂದು ಅಧಿಕಾರಿಯ ಸವಾಲುಗಳಿಗೆ ದಿಟ್ಟವಾಗಿ ಪ್ರತ್ಯುತ್ತರ ನೀಡಿದ್ದರು.
"ನಾನು ಮಾತು ನೀಡಿದಂತೆ ನಂದಿಗ್ರಾಮ್ ನಿಂದ ಸ್ಪರ್ಧಿಸುತ್ತೇನೆ. ಭವಾನಿಪುರ ಕ್ಷೇತ್ರದಿಂದ ನನ್ನ ಬದಲು ಸೋಬನ್ ದೇಬ್ ಚಟ್ಟೋಪಾಧ್ಯಾಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ" ಎಂದು ಮಾರ್ಚ್ 27 ರಿಂದ ಪ್ರಾರಂಭವಾಗುವ ಚುನಾವಣೆಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ ಬಂಗಾಳ ಮುಖ್ಯಮಂತ್ರಿ ಹೇಳಿಕೆ ನೀಡಿದ್ದರು.
Next Story