ಭಾರತ ಈಗ ಪ್ರಜಾಪ್ರಭುತ್ವ ದೇಶವಾಗುಳಿದಿಲ್ಲ:ರಾಹುಲ್ ಗಾಂಧಿ
ಹೊಸದಿಲ್ಲಿ,ಮಾ.11: ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ದಾಳಿಯನ್ನು ಮುಂದುವರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು,ಭಾರತವು ಈಗ ಪ್ರಜಾಪ್ರಭುತ್ವ ದೇಶವಾಗಿ ಉಳಿದಿಲ್ಲ ಎಂದು ಗುರುವಾರ ಟ್ವೀಟಿಸಿದ್ದಾರೆ.
ಭಾರತವು ಈಗ ಪಾಕಿಸ್ತಾನದಷ್ಟೇ ನಿರಂಕುಶ ದೇಶವಾಗಿದೆ ಮತ್ತು ಬಾಂಗ್ಲಾದೇಶಕ್ಕಿಂತ ಕೆಟ್ಟದ್ದಾಗಿದೆ ಎಂಬ ಮಾಧ್ಯಮ ವರದಿಯನ್ನು ಅವರು ತನ್ನ ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.
ಕಳೆದ ತಿಂಗಳು ತಮಿಳುನಾಡಿನಲ್ಲಿ ಮೂರು ದಿನಗಳ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದ ಸಂದರ್ಭದಲ್ಲಿ ರಾಹುಲ್,ಭಾರತದಲ್ಲಿ ಪ್ರಜಾಪ್ರಭುತ್ವ ಸತ್ತುಹೋಗಿದೆ ಎಂದು ಹೇಳಿದ್ದರು.
Next Story