ಕೇಂದ್ರ ಭದ್ರತಾ ಪಡೆಗಳೊಂದಿಗೆ ಬಿಜೆಪಿ ಅಭ್ಯರ್ಥಿಯ ಔತಣಕೂಟ: ಕ್ರಮಕ್ಕೆ ಆಗ್ರಹಿಸಿದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ
ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ೮ ಹಂತಗಳ ಚುನಾವಣೆಯು ನಡೆಯುತ್ತಿದ್ದು, ಈಗಾಗಲೇ ನಾಲ್ಕು ಹಂತಗಳ ಚುನಾವಣೆ ಮುಕ್ತಾಯವಾಗಿದೆ. ಇದೀಗ 5ನೇ ಹಂತದ ಚುನಾವಣೆಯು ಪ್ರಾರಂಭವಾಗುವ ಮೊದಲೇ ಕೇಂದ್ರ ಭದ್ರತಾ ಪಡೆಗಳ ಜೊತೆಗೆ ಬಿಜೆಪಿ ಅಭ್ಯರ್ಥಿಯೋರ್ವ ಊಟ ಮಾಡುತ್ತಿರುವ ಫೋಟೊವೊಂದು ಸಾಮಾಜಿಕ ತಾಣದಾದ್ಯಂತ ವೈರಲ್ ಆಗಿದೆ.
ಈ ಫೋಟೊವನ್ನು ಟ್ವೀಟ್ ಮಾಡಿದ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ, "ಈಶಾನ್ಯ ರಾಣಾಘಾಟ್ ನ ಬಿಜೆಪಿ ಅಭ್ಯರ್ಥಿ ಕೇಂದ್ರ ಭದ್ರತಾ ಪಡೆಗಳೊಂದಿಗೆ ಊಟ ಮಾಡುತ್ತಿರುವ ದೃಶ್ಯ. ಈ ಕುರಿತು ಭಾರತೀಯ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು" ಎಂದು ಹೇಳಿದ್ದಾರೆ.
ನಾಲ್ಕನೇ ಹಂತದ ಚುನಾವಣೆಯ ಸಂದರ್ಭ ಕೂಚ್ ಬೆಹಾರ್ ನಲ್ಲಿ ಕೇಂದ್ರ ಪಡೆಗಳು ನಡೆಸಿದ್ದ ಗುಂಡಿನ ದಾಳಿಯಲ್ಲಿ ನಾಲ್ವರು ಯುವಕರು ಬಲಿಯಾಗಿದ್ದರು.
BJP Candidate for Ranaghat North East (Phase 5 Poll tomorrow) at lunch with central forces...@ECISVEEP please investigate & take action now pic.twitter.com/BjqlmUDyU4
— Mahua Moitra (@MahuaMoitra) April 16, 2021