ಕೋವಿಡ್ ಮೊದಲ ಅಲೆಯ ನಂತರ ಜನರು, ಸರಕಾರದಿಂದ ನಿರ್ಲಕ್ಷ್ಯ: ಮೋಹನ್ ಭಾಗವತ್
ಹೊಸದಿಲ್ಲಿ: ಕೊರೋನ ಸಾಂಕ್ರಾಮಿಕ ರೋಗದ ಮೊದಲ ಅಲೆಯ ನಂತರ ರಾಷ್ಟ್ರದ ಎಲ್ಲಾ ವರ್ಗದವರು ತೋರಿಸಿರುವ ನಿರ್ಲಕ್ಷ್ಯವು ದೇಶಾದ್ಯಂತ ಈಗ ತಲೆದೋರಿರುವ ವೈದ್ಯಕೀಯ ಬಿಕ್ಕಟ್ಟಿಗೆ ಕಾರಣವಾಗಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಇಂದು ಅಭಿಪ್ರಾಯಪಟ್ಟಿದ್ದಾರೆ.
"ಕೊರೋದ ಮೊದಲ ಅಲೆಯ ನಂತರ, ನಾವೆಲ್ಲರೂ ನಿರ್ಲಕ್ಷ್ಯ ವಹಿಸಿದ್ದೇವೆ. ಜನರು, ಸರಕಾರಗಳು, ಆಡಳಿತ ನಿರ್ಲಕ್ಷ್ಯ ತೋರಿದವು. ಕೊರೋನ ಮತ್ತೆ ಬರುತ್ತಿದೆ ಎಂದು ನಮಗೆಲ್ಲರಿಗೂ ತಿಳಿದಿತ್ತು. ವೈದ್ಯರು ನಮಗೆ ಎಚ್ಚರಿಕೆ ನೀಡಿದ್ದರು. ಆದರೂ ನಾವು ನಿರ್ಲಕ್ಷ್ಯ ವಹಿಸಿದ್ದೇವೆ" ಎಂದು ಆರ್ ಎಸ್ ಎಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವತ್ ಹೇಳಿದರು.
Next Story