Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಮೇ ತಿಂಗಳ ಮಳೆ 121 ವರ್ಷಗಳಲ್ಲೇ ಎರಡನೇ...

​ಮೇ ತಿಂಗಳ ಮಳೆ 121 ವರ್ಷಗಳಲ್ಲೇ ಎರಡನೇ ಗರಿಷ್ಠ

ವಾರ್ತಾಭಾರತಿವಾರ್ತಾಭಾರತಿ11 Jun 2021 9:17 AM IST
share
​ಮೇ ತಿಂಗಳ ಮಳೆ 121 ವರ್ಷಗಳಲ್ಲೇ ಎರಡನೇ ಗರಿಷ್ಠ

ಹೊಸದಿಲ್ಲಿ, ಜೂ.11: ದೇಶದಲ್ಲಿ ಕಳೆದ ತಿಂಗಳು ಬಿದ್ದ ಮಳೆಯ ಪ್ರಮಾಣ 121 ವರ್ಷಗಳಲ್ಲೇ ಎರಡನೇ ಗರಿಷ್ಠ ಪ್ರಮಾಣ ಎಂದು ಹವಾಮಾನ ಇಲಾಖೆ ಪ್ರಕಟಿಸಿದೆ. ಎರಡು ಚಂಡಮಾರುತಗಳು ಮತ್ತು ಪಶ್ಚಿಮ ಪ್ರಕ್ಷುಬ್ಧತೆ ಈ ಭಾರೀ ಮಳೆಗೆ ಕಾರಣ ಎಂದು ಹೇಳಿದೆ.

ದೇಶದಲ್ಲಿ ಮೇ ತಿಂಗಳಲ್ಲಿ ಸರಾಸರಿ 34.18 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಇದು ಕೂಡಾ 1901ರ ಬಳಿಕ ದೇಶದಲ್ಲಿ ಮೇ ತಿಂಗಳಲ್ಲಿ ದಾಖಲಾದ ನಾಲ್ಕನೇ ಕನಿಷ್ಠ ಉಷ್ಣಾಂಶವಾಗಿದೆ. 1917ರ ಮೇ ತಿಂಗಳಲ್ಲಿ ಅತ್ಯಂತ ಕನಿಷ್ಠ ಅಂದರೆ 32.68 ಡಿಗ್ರಿ ಉಷ್ಣಾಂಶ ದಾಖಲಾಗಿತ್ತು. ದೇಶದಲ್ಲಿ 1977ರ ಬಳಿಕ ಮೇ ತಿಂಗಳಲ್ಲಿ ಇದುವರೆಗೆ ದಾಖಲಾದ ಅತ್ಯಂತ ಕಡಿಮೆ ತಾಪಮಾನವೆಂದರೆ 33.84 ಡಿಗ್ರಿ ಸೆಲ್ಸಿಯಸ್ ಎಂದು ಹವಾಮಾನ ಇಲಾಖೆ ಅಂಕಿ ಅಂಶ ನೀಡಿದೆ.

ಭಾರತದ ಯಾವುದೇ ಕಡೆಗಳಲ್ಲಿ 2021ರ ಮೇ ತಿಂಗಳಲ್ಲಿ ಉಷ್ಣಗಾಳಿ ಬೀಸಿದ ವರದಿಯಾಗಿಲ್ಲ. ಕಳೆದ ತಿಂಗಳು ದೇಶದಲ್ಲಿ ಸರಾಸರಿ 107.9 ಮಿಲಿಮೀಟರ್ ಮಳೆ ಬಿದ್ದಿದ್ದು, ಇದು ದೀರ್ಘಾವಧಿ ಸರಾಸರಿಯಾದ 62 ಮಿಲಿಮೀಟರ್‌ಗೆ ಹೋಲಿಸಿದರೆ ಶೇಕಡ 74ರಷ್ಟು ಅಧಿಕ. "ಮೇ ತಿಂಗಳಲ್ಲಿ ಬಿದ್ದಿರುವ ಮಳೆ 1901ರ ಬಳಿಕ ದಾಖಲಾದ ಎರಡನೇ ಗರಿಷ್ಠ ಪ್ರಮಾಣ. 1990ರಲ್ಲಿ ಇದುವರೆಗಿನ ಗರಿಷ್ಠ (110.7 ಮಿ.ಮೀ) ಮಳೆ ಬಿದ್ದಿತ್ತು ಎಂದು ಮೇ ತಿಂಗಳ ವರದಿಯಲ್ಲಿ ವಿವರಿಸಿದೆ.

ಅರಬ್ಬಿ ಸಮುದ್ರದಲ್ಲಿ ಮತ್ತು ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಬೀಸಿದ್ದು ಇದಕ್ಕೆ ಪ್ರಮುಖ ಕಾರಣ. ತೀವ್ರ ಸ್ವರೂಪದ ಚಂಡಮಾರುತ ತೌಕ್ತೆ ಅರಬ್ಬಿಸಮುದ್ರದಲ್ಲಿ ಎದ್ದಿದ್ದು, ಮೇ 17ರಂದು ಗುಜರಾತ್ ಕರಾವಳಿ ಮೇಲೆ ಅಪ್ಪಳಿಸಿದೆ. ಪಶ್ಚಿಮ ಕರಾವಳಿಯ ಎಲ್ಲ ರಾಜ್ಯಗಳಲ್ಲಿ ತನ್ನ ಪ್ರಭಾವ ತೋರಿಸಿತ್ತು. ಇದಾದ ಬಳಿಕ ಮೇ 26ರಂದು ಬಂಗಾಳ ಕೊಲ್ಲಿಯಲ್ಲಿ ಇಂಥದ್ದೇ ಚಂಡಮಾರುತ ಎದ್ದಿದ್ದು, ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಮಳೆಗೆ ಕಾರಣವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X