ಪೆಗಾಸಸ್ ಹಗರಣ:ವಿಶೇಷ ತನಿಖೆ ಕೋರಿ ಸಲ್ಲಿಸಿದ ಅರ್ಜಿ ಗುರುವಾರ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್
ಹೊಸದಿಲ್ಲಿ: ಪ್ರತಿಪಕ್ಷದ ರಾಜಕಾರಣಿಗಳು, ಪತ್ರಕರ್ತರು ಹಾಗೂ ಇತರರು ಇಸ್ರೇಲಿ ಸ್ಪೈವೇರ್ಗಳ ಗುರಿಯಾಗಿದ್ದಾರೆ ಎಂಬ ಆರೋಪಗಳನ್ನು ಒಳಗೊಂಡ ಪೆಗಾಸಸ್ ಹಗರಣದ ಕುರಿತು ವಿಶೇಷ ತನಿಖೆಯನ್ನು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠವು ಗುರುವಾರ ವಿಚಾರಣೆ ನಡೆಸಲಿದೆ ಎಂದು NDTV ವರದಿ ಮಾಡಿದೆ.
ಮುಖ್ಯ ನ್ಯಾಯಮೂರ್ತಿ ಎನ್ .ವಿ. ರಮಣ ಹಾಗೂ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಪೀಠದ ಸದಸ್ಯರು.
ಹಿರಿಯ ಪತ್ರಕರ್ತರಾದ ಎನ್. ರಾಮ್ ಹಾಗೂ ಶಶಿ ಕುಮಾರ್, ಸಿಪಿಎಂ ಸಂಸದ ಜಾನ್ ಬ್ರಿಟಾಸ್ ಹಾಗೂ ವಕೀಲ ಎಂ.ಎಲ್. ಶರ್ಮಾ ಅವರು ಯಾವುದೇ ರೀತಿಯ ಕಣ್ಗಾವಲು ನಡೆಸಲು ಸ್ಪೈವೇರ್ ಪರವಾನಗಿ ಪಡೆದಿದ್ದಾರೆಯೇ ಅಥವಾ ಅದನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬಳಸಿದ್ದಾರೆಯೇ ಎಂಬುದನ್ನು ಬಹಿರಂಗಪಡಿಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. .
ಹಲವಾರು ಪ್ರಮುಖ ಮಾಧ್ಯಮಗಳನ್ನು ಒಳಗೊಂಡ ಜಾಗತಿಕ ಮಾಧ್ಯಮ ತನಿಖೆಯು ಭಾರತದಲ್ಲಿ 142 ಕ್ಕೂ ಹೆಚ್ಚು ವ್ಯಕ್ತಿಗಳನ್ನು ಇಸ್ರೇಲಿ ಸಂಸ್ಥೆ ಎನ್ ಎಸ್ ಒ ನ ಪೆಗಾಸಸ್ ಸ್ಪೈವೇರ್ ಬಳಸಿ ಕಣ್ಗಾವಲು ಮಾಡುವ ಸಂಭಾವ್ಯ ಗುರಿಗಳೆಂದು ಗುರುತಿಸಲಾಗಿದೆ ಎಂದು ಹೇಳಲಾಗಿದೆ, ಪೆಗಾಸಸ್ ಅನ್ನು ಸರಕಾರಗಳಿಗೆ ಮಾತ್ರ ಮಾರಾಟ ಮಾಡಲಾಗುತ್ತದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್, ಇಬ್ಬರು ಕೇಂದ್ರ ಸಚಿವರು, ಮಾಜಿ ಚುನಾವಣಾ ಆಯುಕ್ತರು, 40 ಪತ್ರಕರ್ತರು ಸೇರಿದಂತೆ ಹಲವರು ಸೋರಿಕೆಯಾಗಿರುವ ಸಂಭಾವ್ಯ ಗುರಿಗಳ ಪಟ್ಟಿ ಯಲ್ಲಿದ್ದಾರೆ.