Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಭಾರತದಿಂದ ಆಗಮಿಸುವ ಯುಎಇ ನಿವಾಸಿಗಳಿಗೆ...

ಭಾರತದಿಂದ ಆಗಮಿಸುವ ಯುಎಇ ನಿವಾಸಿಗಳಿಗೆ 10 ದಿನದ ಕ್ವಾರಂಟೈನ್

ವಾರ್ತಾಭಾರತಿವಾರ್ತಾಭಾರತಿ5 Aug 2021 9:00 PM IST
share
ಭಾರತದಿಂದ ಆಗಮಿಸುವ ಯುಎಇ ನಿವಾಸಿಗಳಿಗೆ 10 ದಿನದ ಕ್ವಾರಂಟೈನ್

ಅಬುಧಾಬಿ, ಆ.5: ಭಾರತದಿಂದ ವಿಮಾನದ ಮೂಲಕ ಅಬುಧಾಬಿ ಮತ್ತು ರಾಸ್ ಅಲ್ ಖೈಮಾಕ್ಕೆ ಆಗಮಿಸುವ ಯುಎಇ ನಿವಾಸಿಗಳಿಗೆ 10 ದಿನದ ಕ್ವಾರಂಟೈನ್ ಕಡ್ಡಾಯಗೊಳಿಸಿ ಯುಎಇ ಪ್ರಧಾನ ವಿಮಾನಯಾನ ಪ್ರಾಧಿಕಾರ ಆದೇಶ ಜಾರಿಗೊಳಿಸಿದೆ ಎಂದು ‘ಖಲೀಜ್ ಟೈಮ್ಸ್’ ವರದಿ ಮಾಡಿದೆ.

   ಭಾರತ, ಪಾಕ್, ಶ್ರೀಲಂಕಾ, ನೇಪಾಳ, ನೈಜೀರಿಯಾ ಮತ್ತು ಉಗಾಂಡಾದಿಂದ ಆಗಮಿಸುವ ಪ್ರಯಾಣಿಕರಿಗೆ 10 ದಿನದ ಕ್ವಾರಂಟೈನ್‌ನ ಜೊತೆಗೆ ಅವರು ಕ್ವಾರಂಟೈನ್‌ನ 4 ಮತ್ತು 8ನೇ ದಿನದಲ್ಲಿ ಪಿಸಿಆರ್ ಪರೀಕ್ಷೆ ನಡೆಸಬೇಕು ಎಂದು ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈ ಎರಡು ವಿಮಾನ ನಿಲ್ದಾಣಗಳಲ್ಲಿ ಇಳಿದುಕೊಳ್ಳುವ ಪ್ರಯಾಣಿಕರು, ಕ್ವಾರಂಟೈನ್ ಅವಧಿಯಲ್ಲಿ ಜಾಡು ಅನುಸರಿಸುವ ಸಾಧನ(ಟ್ರ್ಯಾಕಿಂಗ್ ಡಿವೈಸ್) ಧರಿಸುವಂತೆ ಸೂಚಿಸಿ ಏರಿಂಡಿಯಾ ಮತ್ತು ಏರಿಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಗಳು ಎಲ್ಲಾ ಟ್ರಾವೆಲ್ ಏಜೆಂಟರಿಗೆ ಸಲಹೆಯನ್ನು ರವಾನಿಸಿದೆ.

ದುಬೈ ಮತ್ತು ಶಾರ್ಜಾಕ್ಕೆ ಪ್ರಯಾಣಿಸುವವರಿಗೆ 10 ದಿನದ ಕ್ವಾರಂಟೈನ್ ಅಗತ್ಯವಿಲ್ಲ. ಆದರೆ ಅವರು ಅಲ್ಲಿಗೆ ತಲುಪಿದ ಬಳಿಕ ಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ನೆಗೆಟಿವ್ ವರದಿ ಬರುವವರೆಗೆ ಕ್ಯಾರಂಟೈನ್‌ನಲ್ಲಿ ಇರುವಂತೆ ಪ್ರಯಾಣಿಕರಿಗೆ ಸಲಹೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

    ಆಗಸ್ಟ್ 5ರಿಂದ ಎಮಿರೇಟ್ಸ್ ವಿಮಾನದ ಮೂಲಕ ದುಬೈಗೆ ಆಗಮಿಸುವ ಪ್ರಯಾಣಿಕರಿಗಿದ್ದ ಕೆಲವು ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಅರ್ಹ ಪ್ರಯಾಣಿಕರು ಜನರಲ್ ಡೈರೆಕ್ಟರೇಟ್ ಆಫ್ ರೆಸಿಡೆನ್ಸಿ ಆ್ಯಂಡ್ ಫಾರಿನರ್ಸ್ ಅಫೇರ್ಸ್(ದುಬೈಯಲ್ಲಿ ನೀಡಲಾದ ವೀಸಾ ಹೊಂದಿರುವವರು) ಅಥವಾ ಫೆಡರಲ್ ಅಥಾರಿಟಿ ಆಫ್ ಐಡೆಂಟಿಟಿ ಮತ್ತು ಸಿಟಿಝನ್‌ಶಿಪ್(ಇತರ ಎಮಿರೇಟ್ಸ್‌ಗಳಲ್ಲಿ ನೀಡಲಾದ ವೀಸಾಗಳಿಗೆ) ನಿಂದ ಅನುಮೋದನೆ ಪಡೆಯಬೇಕು. ಪ್ರಯಾಣದ 48 ಗಂಟೆ ಮುನ್ನ ನಡೆಸಿದ ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಪ್ರಮಾಣಪತ್ರ ಕಡ್ಡಾಯ. ಈ ಪರೀಕ್ಷೆಯನ್ನು ಮಾನ್ಯತೆ ಪಡೆದ ಪ್ರಯೋಗಾಲಯದಲ್ಲಿ ನಡೆಸಿರಬೇಕು ಎಂದು ಸೂಚಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X