Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕುಂಭ ಮೇಳ ಸಂದರ್ಭ ಕೋವಿಡ್ ಪರೀಕ್ಷೆ...

ಕುಂಭ ಮೇಳ ಸಂದರ್ಭ ಕೋವಿಡ್ ಪರೀಕ್ಷೆ ಹಗರಣ; ಲ್ಯಾಬ್‍ಗಳ ಮೇಲೆ ಇಡಿ ದಾಳಿ

ವಾರ್ತಾಭಾರತಿವಾರ್ತಾಭಾರತಿ7 Aug 2021 12:07 PM IST
share
ಕುಂಭ ಮೇಳ ಸಂದರ್ಭ ಕೋವಿಡ್ ಪರೀಕ್ಷೆ ಹಗರಣ; ಲ್ಯಾಬ್‍ಗಳ ಮೇಲೆ ಇಡಿ ದಾಳಿ

ಹರಿದ್ವಾರ್: ಉತ್ತರಾಖಂಡದ ಹರಿದ್ವಾರ್ ಜಿಲ್ಲೆಯಲ್ಲಿ ಎಪ್ರಿಲ್ ತಿಂಗಳಲ್ಲಿ ಕುಂಭ ಮೇಳ ನಡೆದ ಸಂದರ್ಭ ಕೋವಿಡ್-19 ಪರೀಕ್ಷೆಗಳಿಗೆ ಸಂಬಂಧಿಸಿದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸಿವೆಯೆನ್ನಲಾದ ಲ್ಯಾಬ್‍ಗಳ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಶುಕ್ರವಾರ ದಾಳಿ ನಡೆಸಿದೆ. ಕೆಲ ಲ್ಯಾಬ್‍ಗಳ ವಿರುದ್ಧ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದೆಯ್ಲಿದೆ  ಅವುಗಳು ಆರ್ಥಿಕ ಲಾಭಕ್ಕಾಗಿ ಬೋಗಸ್ ಬಿಲ್‍ಗಳನ್ನು ಸೃಷ್ಟಿಸಿದ್ದವು ಎಂದು ಹೇಳಿದೆ.

ಡೆಹ್ರಾಡೂನ್‍ನ ನೋವಸ್ ಪಾಥ್ ಲ್ಯಾಬ್ಸ್, ಹರಿದ್ವಾರದ ಡಿಎನ್‍ಎ ಲ್ಯಾಬ್ಸ್, ನೊಯ್ಡಾದ ಮ್ಯಾಕ್ಸ್ ಕಾರ್ಪೊರೇಟ್ ಸರ್ವಿಸಸ್, ಡಾ ಲಾಲ್ ಚಂದಾನಿ ಲ್ಯಾಬ್ಸ್ ಹಾಗೂ ನಲ್ವಾ ಲ್ಯಾಬ್ಸ್ ಮೇಲೆ ದಾಳಿ ನಡೆಸಲಾಗಿದೆ ಎಂದು ನಿರ್ದೇಶನಾಲಯ ಮಾಹಿತಿ ನೀಡಿದೆ.

ಕುಂಭ ಮೇಳ ಸಂದರ್ಭ ಸಾವಿರಾರು ಭಕ್ತರು ಆಗಮಿಸಿದ್ದರಿಂದ ಅವರ ಕೋವಿಡ್ ಪರೀಕ್ಷೆ ನಡೆಸಲು ಉತ್ತರಾಖಂಡ ಸರಕಾರ ಮೇಲೆ ತಿಳಿಸಿದ ಐದು ಲ್ಯಾಬ್‍ಗಳಿಗೆ ಗುತ್ತಿಗೆ ನೀಡಿತ್ತು. ಆದರೆ ಈ ಲ್ಯಾಬ್‍ಗಳು ಹೆಚ್ಚು ಪರೀಕ್ಷೆ ನಡೆಸದೆ  ಬಿಲ್ ತಯಾರಿಸಲು ಪರೀಕ್ಷೆಗಳನ್ನು ನಡೆಸಲಾಗಿದೆ ಎಂಬ ಕುರಿತು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದವು ಎನ್ನಲಾಗಿದೆ.

ಈಗಾಗಲೇ ಉತ್ತರಾಖಂಡ ಸರಕಾರ ಈ ಲ್ಯಾಬ್‍ಗಳಿಗೆ ರೂ 3.4 ಕೋಟಿ ಪಾವತಿಸಿದೆ. ಈ ಲ್ಯಾಬ್‍ಗಳು ಪರೀಕ್ಷೆ ನಡೆಸದೇ ಇದ್ದ ಕಾರಣ ಶೇ5.3ರಷ್ಟಿದ್ದ ಪಾಸಿಟಿವಿಟಿ  ಪ್ರಮಾಣವನ್ನು ಶೇ 0.18ರಷ್ಟೆಂದು ತೋರಿಸಲಾಗಿತ್ತು.

ಈ ಲ್ಯಾಬ್‍ಗಳು ಒಂದೇ ಮೊಬೈಲ್ ಸಂಖ್ಯೆ ಅಥವಾ ನಕಲಿ ಮೊಬೈಲ್ ಸಂಖ್ಯೆ  ಅಥವಾ ಒಂದೇ ವಿಳಾಸ ಬಳಸಿ ಅಥವಾ ಅನೇಕ ಜನರಿಗೆ ಒಂದೇ ಸ್ಪೆಸಿಮನ್ ರೆಫರೆಲ್ ಫಾರ್ಮ್ ಗಳನ್ನು ಬಳಸಿ ಬಹಳಷ್ಟು ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ತೋರಿಸಿತ್ತೆನ್ನಲಾಗಿದೆ. ಕುಂಭ ಮೇಳಕ್ಕೆ ಆಗಮಿಸದೇ ಇರುವವರ ಹೆಸರಿನಲ್ಲೂ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ತೋರಿಸಲಾಗಿತ್ತು.

ಸುಮಾರು ಒಂದು ಲಕ್ಷ ನಕಲಿ ರ್ಯಾಪಿಡ್ ಆಂಟಿಜನ್ ಪರೀಕ್ಷೆಗಳನ್ನು ನಡೆಸಿವೆ ಎಂದು ಹೇಳಲಾದ ಲಾಲ್‍ಚಂದಾನಿ, ನಲ್ವಾ ಲ್ಯಾಬ್‍ಗಳು ಹಾಗೂ ಮ್ಯಾಕ್ಸ್ ಕಾರ್ಪೊರೇಟ್ ಸರ್ವಿಸಸ್ ವಿರುದ್ಧ ಉತ್ತರಾಖಂಡ ಪೊಲೀಸರು ಜೂನ್ ತಿಂಗಳಲ್ಲಿ ಎಫ್‍ಐಆರ್ ದಾಖಲಿಸಿದ್ದರು. ನಂತರ ಈ ಲ್ಯಾಬ್‍ಗಳು ಎಫ್‍ಐಆರ್ ರದ್ದುಗೊಳಿಸಬೇಕೆಂದು ಕೋರಿ ಉತ್ತರಾಖಂಡ ಹೈಕೋರ್ಟಿನ ಕದ ತಟ್ಟಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X