ಜಮ್ಮು-ಕಾಶ್ಮೀರ: ಉಗ್ರರೊಂದಿಗೆ ಎನ್ಕೌಂಟರ್ ,ಕಿರಿಯ ಸೇನಾಧಿಕಾರಿ ಹುತಾತ್ಮ
ಶ್ರೀನಗರ: ಜಮ್ಮು ಹಾಗೂ ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಭಾರತೀಯ ಸೇನೆಯ ಕಿರಿಯ ನಿಯೋಜಿತ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ.
ಉಗ್ರರು ಅನುಮಾನಾಸ್ಪದವಾಗಿ ಸಂಚರಿಸಿದ ವರದಿಗಳ ನಂತರ ಥಾಣಾಮಂಡಿಯ ಕಾರ್ಯೋಟೆ ಕಲಾಸ್ ಪ್ರದೇಶದಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸುತ್ತಿವೆ ಎಂದು ಮೂಲಗಳು ತಿಳಿಸಿವೆ.
ಬುಧವಾರ ಶೋಧ ಕಾರ್ಯ ಆರಂಭವಾಯಿತು ಹಾಗೂ ಆ ಪ್ರದೇಶದಲ್ಲಿ ಅಡಗಿದ್ದ ಉಗ್ರರು, ಭದ್ರತಾ ಸಿಬ್ಬಂದಿ ಇರುವುದನ್ನು ಗ್ರಹಿಸಿ ಗುಂಡಿನ ದಾಳಿ ನಡೆಸಿದರು, ನಂತರ ಭದ್ರತಾಪಡೆ ಪ್ರತಿದಾಳಿ ನಡೆಸಿತು.
ಎನ್ಕೌಂಟರ್ ಇನ್ನೂ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.
Next Story