Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಲಸೆ ಕಾರ್ಮಿಕರ ಮಾಹಿತಿಗಳನ್ನು ಬಳಸಿ...

ವಲಸೆ ಕಾರ್ಮಿಕರ ಮಾಹಿತಿಗಳನ್ನು ಬಳಸಿ ಕೋಟ್ಯಂತರ ರೂಪಾಯಿ ಪ್ರಾವಿಡೆಂಟ್ ಫಂಡ್ ಅವ್ಯವಹಾರ: ಸಿಬಿಐ ತನಿಖೆ

ವಾರ್ತಾಭಾರತಿವಾರ್ತಾಭಾರತಿ11 Sept 2021 12:59 PM IST
share
ವಲಸೆ ಕಾರ್ಮಿಕರ ಮಾಹಿತಿಗಳನ್ನು ಬಳಸಿ ಕೋಟ್ಯಂತರ ರೂಪಾಯಿ ಪ್ರಾವಿಡೆಂಟ್ ಫಂಡ್ ಅವ್ಯವಹಾರ: ಸಿಬಿಐ ತನಿಖೆ

ಹೊಸದಿಲ್ಲಿ: ಲಾಕ್ ಡೌನ್ ಸಂದರ್ಭ ಉದ್ಯೋಗ ನಷ್ಟ ಸಂಭವಿಸಿದ ಸಂದರ್ಭದಲ್ಲಿ ಜನರಿಗೆ ಅನುಕೂಲಕರವಾಗಲೆಂದು ಉದ್ಯೋಗಿಗಳ ಭವಿಷ್ಯನಿಧಿ ಸಂಘಟನೆ (ಇಪಿಎಫ್‍ಒ) ಕಳೆದ ವರ್ಷದ ಮಾರ್ಚ್ ಹಾಗೂ ಜೂನ್ ನಡುವೆ  ವಿದ್‍ ಡ್ರಾ ಮಾಡುವ ನಿಯಮಾವಳಿಗಳಲ್ಲಿ ಸಡಿಲಿಕೆ ತಂದ ಸಂದರ್ಭ ರೂ 2.71 ಕೋಟಿ ಹಣ ಲಪಟಾಯಿಸಿದ ಆರೋಪದ ಮೇಲೆ ಇಪಿಎಫ್‍ಒ ದ ಮೂವರು ಅಧಿಕಾರಿಗಳ ವಿರುದ್ಧ  ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ಸಿಬಿಐ ದಾಖಲಿಸಿದೆ.

ಈ ಪ್ರಕರಣದ ರೂವಾರಿ ಕಾಂಡಿವಿಲಿ ಪ್ರಾದೇಶಿಕ ಕಚೇರಿಯ ಹಿರಿಯ ಸಾಮಾಜಿಕ ಸುರಕ್ಷತಾ ಸಹಾಯಕ ಚಂದನ್ ಕುಮಾರ್ ಸಿನ್ಹಾ ಎಂಬವರೆಂದು ತಿಳಿದು ಬಂದಿದ್ದು ಈತ ಹಾಗೂ  ಕ್ರಮವಾಗಿ ಕೊಯಂಬತ್ತೂರು ಮತ್ತು ಚೆನ್ನೈ ಪ್ರಾದೇಶಿಕ ಕಚೇರಿಗಳಲ್ಲಿ ಸಹಾಯಕ ಪಿಎಫ್ ಆಯುಕ್ತರುಗಳಾದ ಉತ್ತಮ ತಗರಾಯ್ ಹಾಗು ವಿಜಯ್ ಜರ್ಪೆ ಈ ಪ್ರಕರಣದ ಆರೋಪಿಗಳಾಗಿದ್ದಾರೆ.

ಮೇ 18ರಂದು ಅನಾಮಿಕ ವ್ಯಕ್ತಿಯೊಬ್ಬರಿಂದ ದೊರೆತ ಮಾಹಿತಿಯಿಂದ ಈ ಹಗರಣ  ಇಪಿಎಫ್‍ಒ ದ ವಿಜಿಲೆನ್ಸ್ ವಿಭಾಗಕ್ಕೆ ತಿಳಿದು ಬಂದಿತ್ತು. ನಂತರ ಆಂತರಿಕ ಆಡಿಟ್ ನಡೆದು ಕೋಟ್ಯಂತರ ರೂಪಾಯಿ ಅವ್ಯವಹಾರ  ಒಳಗಿನವರಿಂದಲೇ ನಡೆದಿದೆ ಎಂದು ತಿಳಿಯುತ್ತಲೇ ಸಿಬಿಐಗೆ ಆಗಸ್ಟ್ 24ರಂದು ದೂರು ಸಲ್ಲಿಸಲಾಗಿತ್ತು.

ಇಪಿಎಫ್‍ಒ ವ್ಯವಸ್ಥೆಯಲ್ಲಿನ ನ್ಯೂನತೆಗಳನ್ನು ತಿಳಿದಿದ್ದ ಅಧಿಕಾರಿಗಳು ವಲಸಿಗ ಕಾರ್ಮಿಕರ ಡೇಟಾ ಬಳಸಿ ಸಾಂಕ್ರಾಮಿಕದ ಸಂದರ್ಭ ಈ ಅವ್ಯವಹಾರ ನಡೆಸಿದ್ದರೆನ್ನಲಾಗಿದೆ.

ವಲಸಿಗ ಕಾರ್ಮಿಕರು ಹಾಗೂ ಬಡವರಿಂದ ಸಂಗ್ರಹಿಸಲಾದ ಬ್ಯಾಂಕ್ ಖಾತೆ ಮತ್ತು ಆಧಾರ್ ಸಂಖ್ಯೆಗಳನ್ನು ಬಳಸಿ ಬೋಗಸ್ ಖಾತೆಗಳನ್ನು ಸೃಷ್ಟಿಸಿ ಇವರು ಸಾಂಕ್ರಾಮಿಕದ ಸಂದರ್ಭ ಮುಚ್ಚಿದ ಕಂಪೆನಿಗಳ ಉದ್ಯೋಗಿಗಳೆಂದು ಬಿಂಬಿಸಿ ನಕಲಿ ಕ್ಲೇಮುಗಳನ್ನು ಸಲ್ಲಿಸಿ ಹಣ ವಿದ್‍ಡ್ರಾ ಮಾಡಲಾಗಿತ್ತು ಎಂದು ಮೂಲಗಳಿಂದ ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X