ವಿಧಾನಸಭೆ ಚುನಾವಣೆಗೂ ಮುನ್ನ ಗೋವಾ ಮುಖ್ಯಮಂತ್ರಿಯನ್ನು ಬಿಜೆಪಿ ಬದಲಿಸಲಿದೆ:ಮನೀಶ್ ಸಿಸೋಡಿಯಾ
ಹೊಸದಿಲ್ಲಿ: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಬದಲಿಸಲು ಬಿಜೆಪಿ ಉದ್ದೇಶಿಸಿದೆ ಎಂದು ಎಎಪಿ ಶನಿವಾರ ಹೇಳಿಕೊಂಡಿದ್ದು, ಸಾವಂತ್ ಅವರ ನಾಯಕತ್ವದಲ್ಲಿ ರಾಜ್ಯ ಸರಕಾರದ ಕಾರ್ಯಕ್ಷಮತೆಯ ಬಗ್ಗೆ ಸಾರ್ವಜನಿಕರಿಗೆ ಅತೃಪ್ತಿ ಇದೆ ಎಂದಿದೆ.
ಪಕ್ಷದ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿರಿಯ ಎಎಪಿ ನಾಯಕ ಮನೀಶ್ ಸಿಸೋಡಿಯಾ, ಸಾವಂತ್ ನೇತೃತ್ವದಲ್ಲಿ ಗೋವಾ ರಾಜ್ಯದಲ್ಲಿ ಚುನಾವಣೆಗೆ ಹೋಗುವುದು ಕಷ್ಟ ಎಂದು ಬಿಜೆಪಿ ಅರಿತುಕೊಂಡಿದ್ದರಿಂದ ಹೊಸ ಮುಖ್ಯಮಂತ್ರಿಯನ್ನು ನೇಮಿಸಲು ನಿರ್ಧರಿಸಿದೆ ಎಂದು ಶನಿವಾರ ಹೇಳಿದ್ದಾರೆ.
" ರಾಜ್ಯ ಚುನಾವಣೆಗೆ ಇನ್ನೆರಡು ಮೂರು ತಿಂಗಳ ಮುಂಚೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರ ಬದಲಿಗೆ ಬೇರೊಬ್ಬರನ್ನು ನೇಮಿಸಲು ಬಿಜೆಪಿ ಯೋಜಿಸುತ್ತಿದೆ ಎಂದು ನಾವು ಅತ್ಯಂತ ವಿಶ್ವಾಸಾರ್ಹ ಮೂಲಗಳಿಂದ ತಿಳಿದುಕೊಂಡಿದ್ದೇವೆ" ಎಂದು ಸಿಸೋಡಿಯಾ ಹೇಳಿದ್ದಾರೆಂದು ಪಿಟಿಐ ವರದಿ ಮಾಡಿದೆ.
Next Story