ರಾಷ್ಟ್ರೀಯ ಭದ್ರತೆಯ ಹೆಸರಿನಲ್ಲಿ ನುಣುಚಿಕೊಳ್ಳಲು ಕೇಂದ್ರದ ಯತ್ನದ ಹೊರತಾಗಿಯೂ ಸುಪ್ರೀಂ ಆದೇಶ ಸ್ವಾಗತಾರ್ಹ:ಕಾಂಗ್ರೆಸ್
ಪೆಗಾಸಸ್ ಬೇಹುಗಾರಿಕೆ ಪ್ರಕರಣ
ಹೊಸದಿಲ್ಲಿ: ಪೆಗಾಸಸ್ ಸ್ಪೈವೇರ್ ಪ್ರಕರಣವನ್ನು ಪರಿಶೀಲಿಸಲು ತಜ್ಞರ ಸಮಿತಿಯನ್ನು ರಚಿಸುವ ಸುಪ್ರೀಂ ಕೋರ್ಟ್ ಆದೇಶವನ್ನು ಕಾಂಗ್ರೆಸ್ ಇಂದು ಸ್ವಾಗತಿಸಿದೆ ಹಾಗೂ ರಾಷ್ಟ್ರೀಯ ಭದ್ರತೆಯ ಹೆಸರಿನಲ್ಲಿ ನುಣುಚಿಕೊಳ್ಳುವ ಮತ್ತು ಗಮನವನ್ನು ಬೇರೆಡೆಗೆ ಸೆಳೆಯುವ ಸರಕಾರದ ಪ್ರಯತ್ನಗಳನ್ನು ನ್ಯಾಯಾಲಯ ವಿಫಲಗೊಳಿಸಿದೆ ಎಂದು ಹೇಳಿದೆ.
"ರಾಷ್ಟ್ರೀಯ ಭದ್ರತೆಯ ಹೆಸರಿನಲ್ಲಿ ನುಣುಚಿಕೊಳ್ಳಲು, ತಪ್ಪಿಸಿಕೊಳ್ಳಲು ಹಾಗೂ ಗಮನವನ್ನು ಬೇರೆಡೆಗೆ ತಿರುಗಿಸಲು ನರೇಂದ್ರ ಮೋದಿ ಸರಕಾರದ ಮುಜುಗರದ ಪ್ರಯತ್ನಗಳ ಹೊರತಾಗಿಯೂ ಸ್ಪೈವೇರ್ ಪೆಗಾಸಸ್ ದುರುಪಯೋಗವನ್ನು ಪರಿಶೀಲಿಸಲು ವಿಶೇಷ ಸಮಿತಿಯನ್ನು ರಚಿಸುವ ಸುಪ್ರೀಂಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇವೆ. ಸತ್ಯಮೇವ ಜಯತೆ" ಎಂದು ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಟ್ವಿಟರ್ನಲ್ಲಿ ಹೇಳಿದ್ದಾರೆ.
Next Story