ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ
ಹೊಸದಿಲ್ಲಿ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ಗುರುವಾರ ಮಧ್ಯಾಹ್ನ 2:30ಕ್ಕೆ ಮುಂದೂಡಿದೆ.
ನಾಳೆ ಮಧ್ಯಾಹ್ನ 2:30ರ ನಂತರ ವಾದಗಳು ಮುಂದುವರಿಯಲಿವೆ. ಗುರುವಾರ ಎನ್ ಸಿಬಿ ಪರವಾಗಿ ಎಎಸ್ ಜಿ ಅನಿಲ್ ಸಿಂಗ್ ವಾದ ಮಂಡಿಸಲಿದ್ದಾರೆ. ವಾದಗಳನ್ನು ಮುಕ್ತಾಯಗೊಳಿಸಲು ಒಂದು ಗಂಟೆ ತೆಗೆದುಕೊಳ್ಳುವುದಾಗಿ ಎಎಸ್ ಜಿ ಅನಿಲ್ ಸಿಂಗ್ ಹೇಳಿದ್ದಾರೆ.
"ಆರ್ಯನ್ ಖಾನ್ ಬಂಧನಕ್ಕೆ ಸೂಕ್ತ ಕಾರಣ ನೀಡಿಲ್ಲ. ಬಂಧನಕ್ಕೂ ಮೊದಲು ಸೂಕ್ತ ಕಾರಣ ನೀಡಬೇಕಾಗಿತ್ತು. ಸೂಕ್ತ ಕಾರಣ ನೀಡದೇ ಬಂಧಿಸಲಾಗಿದೆ. ಯಾವ ಕಾರಣಕ್ಕೆ ಬಂಧನವೆಂದು ತಿಳಿದುಕೊಳ್ಳುವ ಹಕ್ಕಿದೆ. ಕಾರಣ ನೀಡದೇ ಬಂಧಿಸಲಾಗಿದೆ. ಹೀಗಾಗಿ ಅವರಿಗೆ ಜಾಮೀನು ನೀಡಬೇಕು'' ಎಂದು ಆರ್ಯನ್ ಖಾನ್ ಪರ ಮುಕುಲ್ ರೋಹ್ಟಗಿ ವಾದ ಮಂಡಿಸಿದರು.
Next Story