ರೈತರ ಪ್ರತಿಭಟನೆ ಕುರಿತು ಚರ್ಚಿಸಲು ಗುರುವಾರ ಅಮಿತ್ ಶಾ ಭೇಟಿಯಾಗಲಿದ್ದಾರೆ ಅಮರಿಂದರ್ ಸಿಂಗ್
ಚಂಡೀಗಢ: ಪಂಜಾಬ್ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಚಳವಳಿಗೆ ಸಂಭವನೀಯ ಪರಿಹಾರಗಳನ್ನು ಚರ್ಚಿಸಲು ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ.
ಕೆಲವು ಕೃಷಿ ತಜ್ಞರೊಂದಿಗೆ ಅಮಿತ್ ಶಾ ಅವರನ್ನು ಭೇಟಿ ಮಾಡುವುದಾಗಿ ಅಮರಿಂದರ್ ಸಿಂಗ್ ಬುಧವಾರ ಹೇಳಿದ್ದಾರೆ.
"ನಾಳೆ ನಾನು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದೇನೆ ಹಾಗೂ ನನ್ನೊಂದಿಗೆ 25-30 ಜನರು ಇರುತ್ತಾರೆ. ನಾನು ಪಂಜಾಬ್ನ ಮುಖ್ಯಮಂತ್ರಿಯಾಗಿದ್ದರಿಂದ ಹಾಗೂ ಕೃಷಿಕನಾಗಿರುವುದರಿಂದ ಪರಿಹಾರವನ್ನು ಕಂಡುಹಿಡಿಯಲು ಸಹಾಯ ಮಾಡಬಹುದು ಎಂದು ನಾನು ಭಾವಿಸುತ್ತೇನೆ" ಎಂದು ಅಮರಿಂದರ್ ಸಿಂಗ್ ಹೇಳಿದರು.
Next Story