ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅಮಾನತು
ಮುಂಬೈ: ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬಿರ್ ಸಿಂಗ್ ಅವರನ್ನು ಮಹಾರಾಷ್ಟ್ರ ಸರಕಾರ ಗುರುವಾರ ಅಮಾನತುಗೊಳಿಸಿದೆ. ಪರಮ್ ಬಿರ್ ಹಾಗೂ ಮತ್ತೊಬ್ಬ ಡಿಸಿಪಿ ಶ್ರೇಣಿಯ ಅಧಿಕಾರಿಯ ಅಮಾನತು ಶಿಕ್ಷೆಯನ್ನು ಜಾರಿಗೊಳಿಸಲು ಮಹಾರಾಷ್ಟ್ರದ ಡಿಜಿಪಿಗೆ ಆದೇಶವನ್ನು ಕಳುಹಿಸಲಾಗಿದೆ ಎಂದು indianexpress.com ವರದಿ ಮಾಡಿದೆ.
ಮೂರು ವಾರಗಳ ಬಳಿಕ ಆಸ್ಪತ್ರೆಯಿಂದ ಹಿಂದಿರುಗಿದ ನಂತರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಸಿಂಗ್ ಅವರ ಅಮಾನತಿಗಾಗಿನ ಕಡತವನ್ನು ತೆರವುಗೊಳಿಸಿದರು.
ಮುಖೇಶ್ ಅಂಬಾನಿಯವರ ನಿವಾಸ ಆಂಟಿಲಿಯಾ ಹೊರಗೆ ಸ್ಫೋಟಕಗಳನ್ನು ವಶಪಡಿಸಿಕೊಂಡ ನಂತರ ಹಾಗೂ ಥಾಣೆ ಉದ್ಯಮಿ ಮನ್ಸುಖ್ ಹಿರೇನ್ ಹತ್ಯೆಯ ನಂತರ ಸಿಂಗ್ ಮುಂಬೈ ಹಾಗೂ ಇತರ ನಗರಗಳಲ್ಲಿ ಎಫ್ಐಆರ್ಗಳನ್ನು ಎದುರಿಸುತ್ತಿದ್ದಾರೆ.
Next Story