ತಮಿಳುನಾಡಿನಲ್ಲಿ ಅಕಾಲಿಕ ಮಳೆ; ಚೆನ್ನೈನಲ್ಲಿ ರೆಡ್ ಅಲರ್ಟ್
ಚೆನ್ನೈ : ತಮಿಳುನಾಡಿನಲ್ಲಿ ಅಕಾಲಿಕವಾಗಿ ವ್ಯಾಪಕ ಮಳೆಯಾಗುತ್ತಿದ್ದು, ಚೆನ್ನೈ, ಕಾಂಚಿಪುರಂ, ತಿರುವಲ್ಲೂರು ಮತ್ತು ಚಿಂಗಲ್ ಪೇಟೆ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಚೆನ್ನೈನಲ್ಲಿ ವ್ಯಾಪಕ ಮಳೆಯಿಂದಾಗಿ ರಸ್ತೆ ಹಾಗೂ ಸುರಂಗ ಮಾರ್ಗಗಳು ಜಲಾವೃತವಾಗಿದ್ದು, ಮಳೆ ಸಂಬಂಧಿ ಅನಾಹುತ ಗಳಿಂದ ಮೂವರು ಮೃತಪಟ್ಟಿದ್ದಾರೆ.
ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಗ್ರೇಟರ್ ಚೆನ್ನೈ ಕಾರ್ಪೊರೇಷನ್ನ ಪ್ರವಾಹ ನಿಯಂತ್ರಣ ಕೊಠಡಿಗೆ ಭೇಟಿ ನೀಡಿ ಮಳೆ ಮತ್ತು ಪರಿಹಾರ ಕಾರ್ಯಗಳ ವೀಕ್ಷಣೆ ನಡೆಸಿದರು.
ಮಳೆ ಸಂಬಂಧಿ ಅನಾಹುತಗಳಿಂದಾಗಿ ಇಬ್ಬರು ಮಹಿಳೆಯರು ಮತ್ತು ಬಾಲಕ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ ಎಂದು ರಾಜ್ಯದ ಕಂದಾಯ ಮತ್ತು ವಿಕೋಪ ನಿರ್ವಹಣೆ ಸಚಿವ ಕೆಕೆಎಸ್ಎಸ್ಆರ್ ರಾಮಚಂದ್ರನ್ ಹೇಳಿದ್ದಾರೆ.
ವ್ಯಾಪಕ ಮಳೆಯಿಂದಾಗಿ ರಸ್ತೆ, ಸುರಂಗ ಮಾರ್ಗಗಳು ಜಲಾವೃತವಾಗಿರುವುದರಿಂದ ಸಂಚಾರ ವ್ಯವಸ್ಥೆ ಮತ್ತು ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡ ಹಿನ್ನೆಲೆಯಲ್ಲಿ, ಜನ ಸುರಕ್ಷಿತವಾಗಿ ಮನೆಗಳಿಗೆ ತಲುಪುವ ದೃಷ್ಟಿಯಿಂದ ಮೆಟ್ರೊ ರೈಲು ಸಂಚಾರವನ್ನು ಮಧ್ಯರಾತ್ರಿ 12ರವರೆಗೂ ವಿಸ್ತರಿಸಲಾಗಿತ್ತು.