ದ್ವೇಷ ಭಾಷಣ ಪ್ರಕರಣ: ರಿಝ್ವಿ ಅಲಿಯಾಸ್ ಜಿತೇಂದ್ರ ನಾರಾಯಣ್ ತ್ಯಾಗಿ ಬಂಧನ
ಹೊಸದಿಲ್ಲಿ: ದ್ವೇಷ ಭಾಷಣ ಪ್ರಕರಣದಲ್ಲಿ ಉತ್ತರ ಪ್ರದೇಶ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಸೀಂ ರಿಜ್ವಿ ಅಲಿಯಾಸ್ ಜಿತೇಂದ್ರ ನಾರಾಯಣ ತ್ಯಾಗಿ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
ಹರಿದ್ವಾರ-ಉತ್ತರಪ್ರದೇಶ ಗಡಿಯಲ್ಲಿರುವ ನರ್ಸನ್ ಎಂಬಲ್ಲಿ ಜಿತೇಂದ್ರ ನಾರಾಯಣ ತ್ಯಾಗಿಯನ್ನು ಪೊಲೀಸರು ಬಂಧಿಸಿದ್ದಾರೆ. ಹರಿದ್ವಾರದಲ್ಲಿ ಧರ್ಮ ಸಂಸತ್ತಿನ ವೇಳೆ ವೇದಿಕೆಯಿಂದ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಅವರ ಬಂಧನ ನಡೆದಿದೆ ಎಂದು ತಿಳಿದು ಬಂದಿದೆ.
ದ್ವೇಷ ಭಾಷಣ ಪ್ರಕರಣದಲ್ಲಿ ಹರಿದ್ವಾರ ಕೊಟ್ವಾಲಿ ಪೊಲೀಸರು 153ಎ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ವಿಚಾರದಲ್ಲಿ ಎಸ್ಐಟಿ ಕೂಡ ತನಿಖೆ ನಡೆಸುತ್ತಿದೆ.
Next Story