ಎಐಎಂಐಎಂ ಮುಖಂಡ ಅಸದುದ್ದೀನ್ ಉವೈಸಿಗೆ ಝೆಡ್ ಶ್ರೇಣಿಯ ಭದ್ರತೆ
ಅಸದುದ್ದೀನ್ ಉವೈಸಿ
ಹೊಸದಿಲ್ಲಿ: ಉತ್ತರ ಪ್ರದೇಶದ ಮೀರತ್ನಲ್ಲಿ ಚುನಾವಣಾ ಪ್ರಚಾರ ಮುಗಿಸಿ ದಿಲ್ಲಿಗೆ ವಾಪಸಾಗುತ್ತಿದ್ದ ಎಐಎಂಐಎಂ ಮುಖಂಡ ಅಸದುದ್ದೀನ್ ಉವೈಸಿ ಅವರ ಕಾರಿನ ಮೇಲೆ ಗುಂಡು ಹಾರಿಸಿದ ಘಟನೆ ನಡೆದ ಮರುದಿನವೇ ಅವರಿಗೆ ಝೆಡ್ ಶ್ರೇಣಿಯ ಭದ್ರತೆಯನ್ನು ಒದಗಿಸಲಾಗಿದೆ ಎಂದು NDTV ವರದಿ ಮಾಡಿದೆ.
ಘಟನೆಗೆ ಸಂಬಂಧಿಸಿ ಓರ್ವ ಶೂಟರ್ನನ್ನು ವಶಕ್ಕೆ ಪಡೆಯಲಾಗಿದೆ ಎಂದು ndtv ವರದಿ ಮಾಡಿದೆ.
ದಿಲ್ಲಿ ಸಮೀಪದ ಪಶ್ಚಿಮ ಉತ್ತರ ಪ್ರದೇಶದ ಹಾಪುರ್ನಲ್ಲಿರುವ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದೆ.
ಶೂಟರ್ಗಳು ಶಸ್ತ್ರಾಸ್ತ್ರಗಳನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ಉವೈಸಿ ತಿಳಿಸಿದ್ದಾರೆ.
Next Story