ಪಂಜಾಬ್ ಜನರ ಆದೇಶವನ್ನು ವಿನಮ್ರವಾಗಿ ಸ್ವೀಕರಿಸಬೇಕು: ನವಜೋತ್ ಸಿಂಗ್ ಸಿಧು
ಚಂಡಿಗಡ: ಪಂಜಾಬ್ ಅಸೆಂಬ್ಲಿ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿರುವಂತೆಯೇ ಕಾಂಗ್ರೆಸ್ನ ನಾಯಕ ನವಜೋತ್ ಸಿಂಗ್ ಸಿಧು ಅವರು "ಜನರ ಧ್ವನಿ ದೇವರ ಧ್ವನಿಯಾಗಿದೆ. ಪಂಜಾಬ್ ಜನತೆಯ ಆದೇಶವನ್ನು ನಮ್ರತೆಯಿಂದ ಸ್ವೀಕರಿಸಿ. ಆಪ್ ಗೆ ಅಭಿನಂದನೆಗಳು" ಎಂದು ಟ್ವೀಟ್ ಮಾಡಿದ್ದಾರೆ.
117 ಸದಸ್ಯ ಬಲದ ಪಂಜಾಬ್ ವಿಧಾನಸಭೆಯಲ್ಲಿ ಆಮ್ ಆದ್ಮಿ ಪಕ್ಷ 91 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 17 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.
Next Story