ಕೇಂದ್ರ ಸಚಿವರ ಪುತ್ರನ ಜಾಮೀನು ಅರ್ಜಿಗೆ ಕಟುವಾಗಿ ವಿರೋಧಿಸಲಾಗಿದೆ: ಸುಪ್ರೀಂ ಕೋರ್ಟ್ಗೆ ತಿಳಿಸಿದ ಉತ್ತರಪ್ರದೇಶ
ಲಖಿಂಪುರ ಖೇರಿ ಪ್ರಕರಣ
ಆಶಿಶ್ ಮಿಶ್ರಾ
ಹೊಸದಿಲ್ಲಿ : ಲಖಿಂಪುರ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕಾರನ್ನು ಹರಿಸಿದ್ದ ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರ ಪುತ್ರ ಆಶಿಶ್ ಮಿಶ್ರಾ ಜಾಮೀನು ಅರ್ಜಿಯನ್ನು "ಕಟುವಾಗಿ ವಿರೋಧಿಸಲಾಗಿದೆ" ಎಂದು ಸುಪ್ರೀಂಕೋರ್ಟ್ ಗೆ ಇಂದು ತಿಳಿಸಿರುವ ಉತ್ತರ ಪ್ರದೇಶ ಸರಕಾರ, ಆರೋಪಿಗೆ ವಿಶೇಷ ಆತಿಥ್ಯ ನೀಡಲಾಗುತ್ತಿದೆ. ಸಾಕ್ಷಿಗೆ ಬೆದರಿಕೆ ಹಾಕಲಾಗುತ್ತಿದೆ ಎಂಬ ಸಂತೃಸ್ತ ಕುಟುಂಬಗಳ ಆರೋಪಗಳನ್ನು ತಳ್ಳಿ ಹಾಕಿದೆ.
ಲಖಿಂಪುರ ಖೇರಿ ಪ್ರಕರಣದಲ್ಲಿ ಆಶೀಷ್ ಮಿಶ್ರಾ ಜಾಮೀನನ್ನು ಪ್ರಶ್ನಿಸುವ ಮನವಿಗೆ ಪ್ರತಿಕ್ರಿಯೆಯಾಗಿ, ಉತ್ತರ ಪ್ರದೇಶ ಸರಕಾರವು ಇಂದು ಸುಪ್ರೀಂ ಕೋರ್ಟ್ನಲ್ಲಿ ತನ್ನ ಉತ್ತರವನ್ನು ಸಲ್ಲಿಸಿತು. ಜಾಮೀನಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ನಿರ್ಧಾರವು "ಸಂಬಂಧಿತ ಅಧಿಕಾರಿಗಳ ಮುಂದೆ ಪರಿಗಣನೆಗೆ ಬಾಕಿಯಿದೆ" ಎಂದು ಹೇಳಿದೆ.
ಅಲಹಾಬಾದ್ ಹೈಕೋರ್ಟ್ನಲ್ಲಿ ಉತ್ತರಪ್ರದೇಶ ಸರಕಾರ ಆಶಿಶ್ ಮಿಶ್ರಾಗೆ ಜಾಮೀನು ನೀಡುವುದನ್ನು ವಿರೋಧಿಸಿಲ್ಲ ಎಂಬ ಆರೋಪಗಳು ಸಂಪೂರ್ಣವಾಗಿ ಸುಳ್ಳು... ಜಾಮೀನು ಅರ್ಜಿಯನ್ನು ಉತ್ತರಪ್ರದೇಶ ಸರಕಾರ ತೀವ್ರವಾಗಿ ವಿರೋಧಿಸಿತು ಎಂದು ಅದು ಹೇಳಿದೆ.
ಲಖಿಂಪುರ ಖೇರಿ ಪ್ರಕರಣದಲ್ಲಿ ಸಾಕ್ಷಿಯೊಬ್ಬರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪವನ್ನು ನಿರಾಕರಿಸಿರುವ ಉತ್ತರ ಪ್ರದೇಶ ಸರಕಾರ, ಹೋಳಿ ಹಬ್ಬದಂದು ಬಣ್ಣ ಎರಚುವ ವೈಯಕ್ತಿಕ ಗಲಾಟೆಯ ವೇಳೆ ಅಲ್ಲಿ ಹಲ್ಲೆ ನಡೆದಿದೆ ಎಂದು ಹೇಳಿದೆ.