ಜಮ್ಮು ಕಾಶ್ಮೀರ: ತೀರ್ಥ ಯಾತ್ರಾರ್ಥಿಗಳ ಬಸ್ನಲ್ಲಿ ಅಗ್ನಿ ಅವಘಡ; ನಾಲ್ವರು ಮೃತ್ಯು, 20 ಮಂದಿಗೆ ಗಾಯ
Photo: Twitter
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ಯಾತ್ರಾರ್ಥಿಗಳ ಬಸ್ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಬಸ್ನಲ್ಲಿದ್ದ 4 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಬಸ್ನ ಇಂಜಿನ್ನಲ್ಲಿ ಕಾಣಿಸಿಕೊಂಡ ಬೆಂಕಿ, ನಂತರ ಸಂಪೂರ್ಣ ಬಸ್ ಆವರಿಸಿ ಅವಘಡ ಸಂಭವಿಸಿದೆ. ಸದ್ಯಕ್ಕೆ ಬೆಂಕಿಗೆ ಕಾರಣ ಏನು ಎಂಬುದು ಸ್ಪಷ್ಟವಾಗಿಲ್ಲ. ಎಲ್ಲ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಬಳಿಕ ಅವರನ್ನು ಜಮ್ಮು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
At least four persons are feared to have died while over twenty others have sustained burn injuries after a bus carrying pilgrims of Shri Mata Vaishno Devi Shrine (SMVDS) caught fire in Katra area of Reasi district in Jammu. pic.twitter.com/wlRnQF6A0H
— Kashmir Update (@KashmirUpdate1) May 13, 2022
Next Story