ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರಕಾರ

ಹೊಸದಿಲ್ಲಿ: ಏರುತ್ತಿರುವ ಹಣದುಬ್ಬರದ ಮಧ್ಯೆ ಇಂಧನ ಬೆಲೆಗಳ ಮೇಲಿನ ಕೇಂದ್ರ ಅಬಕಾರಿ ಸುಂಕದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಡಿತವನ್ನು ಘೋಷಿಸಿದ್ದರಿಂದ ಪೆಟ್ರೋಲ್ ಬೆಲೆ ₹ 9.5 ರಷ್ಟು ಮತ್ತು ಡೀಸೆಲ್ ₹ 7 ರಷ್ಟು ಅಗ್ಗವಾಗಲಿದೆ.
ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ ₹8 ಮತ್ತು ಡೀಸೆಲ್ಗೆ ₹6 ರಷ್ಟು ಕಡಿತಗೊಳಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. ಕೇಂದ್ರ ಅಬಕಾರಿ ಸುಂಕವನ್ನು ಕಡಿತಗೊಳಿಸುವುದರಿಂದ ರೂ.1 ಲಕ್ಷ ಕೋಟಿ ನಷ್ಟವಾಗಲಿದೆ ಎಂದು ಸರ್ಕಾರ ಹೇಳಿದೆ.
ಇದೇ ರೀತಿಯ ಕಡಿತವನ್ನು ಜಾರಿಗೆ ತಂದು ಅದರ ಪ್ರಯೋಜನವನ್ನು ಸಾಮಾನ್ಯ ಜನರಿಗೆ ನೀಡಲು ಸಚಿವರು ರಾಜ್ಯಗಳಿಗೆ ತಾಕೀತು ಮಾಡಿದರು.
"ಎಲ್ಲಾ ರಾಜ್ಯ ಸರ್ಕಾರಗಳಿಗೆ, ವಿಶೇಷವಾಗಿ ಕಳೆದ ಸುತ್ತಿನಲ್ಲಿ (ನವೆಂಬರ್ 2021) ಕಡಿತವನ್ನು ಮಾಡದ ರಾಜ್ಯಗಳಿಗೆ ಇದೇ ರೀತಿಯ ಕಡಿತವನ್ನು ಜಾರಿಗೆ ತರಲು ಮತ್ತು ಸಾಮಾನ್ಯ ಜನರಿಗೆ ಪರಿಹಾರವನ್ನು ನೀಡಲು ನಾನು ಒತ್ತಾಯಿಸಲು ಬಯಸುತ್ತೇನೆ" ಎಂದು ನಿರ್ಮಲಾ ಸೀತಾರಾಮನ್ ಮನವಿ ಮಾಡಿದರು.
ಅಲ್ಲದೆ, ದಾಖಲೆ ಮಟ್ಟಕ್ಕೆ ಏರುತ್ತಿರುವ ಅಡುಗೆ ಅನಿಲ ದರದಿಂದ ಉಂಟಾಗುವ ಹೊರೆಯನ್ನು ಕಡಿಮೆ ಮಾಡಲು ಸರ್ಕಾರವು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಒಂದು ವರ್ಷದಲ್ಲಿ 12 ಸಿಲಿಂಡರ್ಗಳಿಗೆ ಪ್ರತಿ ಸಿಲಿಂಡರ್ಗೆ ₹ 200 ಸಬ್ಸಿಡಿ ನೀಡುತ್ತದೆ ಎಂದೂ ಅವರು ತಿಳಿಸಿದ್ದಾರೆ. "ಇದು ನಮ್ಮ ತಾಯಂದಿರು ಮತ್ತು ಸಹೋದರಿಯರಿಗೆ ಸಹಾಯ ಮಾಡುತ್ತದೆ" ಎಂದು ತಮ್ಮ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.
ತೀವ್ರ ಬೆಲೆ ಏರಿಕೆಗಳ ನಡುವೆ ಸರ್ಕಾರವನ್ನು ಸಮರ್ಥಿಸಿಕೊಂಡ ಸಚಿವರು, ಬಡವರನ್ನು ಮೇಲೆತ್ತಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
"ನಾವು ಬಡ ಮತ್ತು ಮಧ್ಯಮ ವರ್ಗದವರಿಗೆ ಸಹಾಯ ಮಾಡಲು ಹಲವಾರು ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಇದರ ಪರಿಣಾಮವಾಗಿ, ನಮ್ಮ ಅಧಿಕಾರಾವಧಿಯಲ್ಲಿ ಸರಾಸರಿ ಹಣದುಬ್ಬರವು ಹಿಂದಿನ ಸರ್ಕಾರಗಳಿಗಿಂತ ಕಡಿಮೆಯಾಗಿದೆ" ಎಂದು ಹೇಳಿದ್ದಾರೆ.
7/12 We are reducing the Central excise duty on Petrol by ₹ 8 per litre and on Diesel by ₹ 6 per litre.
— Nirmala Sitharaman (@nsitharaman) May 21, 2022
This will reduce the price of petrol by ₹ 9.5 per litre and of Diesel by ₹ 7 per litre.
It will have revenue implication of around ₹ 1 lakh crore/year for the government.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.