ಮಿತ್ರಪಕ್ಷ ಆರ್ಎಲ್ಡಿಯ ಜಯಂತ್ ಚೌಧರಿ ಅವರನ್ನು ರಾಜ್ಯಸಭಾ ಅಭ್ಯರ್ಥಿಯನ್ನಾಗಿ ಘೋಷಿಸಿದ ಸಮಾಜವಾದಿ ಪಕ್ಷ
ಲಕ್ನೊ: ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷವು ಮಿತ್ರಪಕ್ಷ ಆರ್ಎಲ್ಡಿಯ ಮುಖ್ಯಸ್ಥ ಜಯಂತ್ ಚೌಧರಿ ಅವರನ್ನು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಘೋಷಿಸಿದೆ ಎಂದು NDTV ವರದಿ ಮಾಡಿದೆ.
ಅಖಿಲೇಶ್ ಯಾದವ್ ಅವರು ಮಿತ್ರಪಕ್ಷ ಆರ್ಎಲ್ಡಿಯ ಮುಖ್ಯಸ್ಥ ಜಯಂತ್ ಚೌಧರಿ ಅವರನ್ನು ರಾಜ್ಯಸಭೆಗೆ ಪಕ್ಷದ ಮೂರನೇ ಅಭ್ಯರ್ಥಿಯಾಗಿ ಆಯ್ಕೆ ಮಾಡಲು ನಿರ್ಧರಿಸಿದ್ದಾರೆ.
ಸಂಸತ್ತಿನ ಮೇಲ್ಮನೆಗೆ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಅವರ ಆಯ್ಕೆಯಾಗುವ ಸಾಧ್ಯತೆಯಿದೆ ಎಂಬ ಊಹಾಪೋಹಗಳು ಈ ಹಿಂದೆ ಇದ್ದವು.
ಡಿಂಪಲ್ ಯಾದವ್ ರಾಜ್ಯಸಭಾ ಅಭ್ಯರ್ಥಿಯಾಗಲಿದ್ದಾರೆಂಬ ವರದಿಗಳ ನಂತರ ಜಯಂತ್ ಚೌಧರಿ ಅಸಮಾಧಾನಗೊಂಡಿದ್ದಾರೆ ಎಂದು ವರದಿಯಾಗಿದೆ.
ಮೂಲಗಳ ಪ್ರಕಾರ ಅಖಿಲೇಶ್ ಯಾದವ್ ಅವರು ಇಂದು ಬೆಳಿಗ್ಗೆ ರಾಷ್ಟ್ರೀಯ ಲೋಕದಳ (ಆರ್ಎಲ್ಡಿ) ಅಧ್ಯಕ್ಷ ಜಯಂತ್ ಚೌಧರಿಗೆ ಕರೆ ಮಾಡಿ ನೀವು ರಾಜ್ಯಸಭೆಗೆ ಪಕ್ಷದ ಅಂತಿಮ ಆಯ್ಕೆಯಾಗಿದ್ದೀರಿ ಎಂದು ತಿಳಿಸಿದರು.
Next Story