ಯುವಕರು ನಿರುದ್ಯೋಗದ 'ಅಗ್ನಿಪಥ'ದಲ್ಲಿ ನಡೆಯುವಂತೆ ಮಾಡುತ್ತಿದ್ದಾರೆ: ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
Photo:PTI
ಹೊಸದಿಲ್ಲಿ: 'ಅಗ್ನಿಪಥ' ನೇಮಕಾತಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ವಿರುದ್ಧ ರವಿವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.
"ಪದೇ ಪದೇ ಉದ್ಯೋಗಗಳ ಬಗ್ಗೆ ಸುಳ್ಳು ಭರವಸೆ ನೀಡುವ ಮೂಲಕ ಪ್ರಧಾನಿ ದೇಶದ ಯುವಕರನ್ನು ನಿರುದ್ಯೋಗದ 'ಅಗ್ನಿಪಥ'ದಲ್ಲಿ ನಡೆಯುವಂತೆ ಮಾಡುತ್ತಿದ್ದಾರೆ. 8 ವರ್ಷಗಳಲ್ಲಿ 16 ಕೋಟಿ ಉದ್ಯೋಗಗಳನ್ನು ನೀಡಬೇಕಾಗಿತ್ತು. ಆದರೆ ಯುವಕರಿಗೆ ಪಕೋಡಗಳನ್ನು ಹುರಿಯುವ ಜ್ಞಾನ ಮಾತ್ರ ಸಿಕ್ಕಿತು. ದೇಶದ ಈ ಸ್ಥಿತಿಗೆ ಪ್ರಧಾನಿಯವರೇ ಕಾರಣ’’ಎಂದು ರಾಹುಲ್ ಗಾಂಧಿ ಟ್ವೀಟಿಸಿದ್ದಾರೆ.
बार-बार नौकरी की झूठी उम्मीद दे कर, प्रधानमंत्री ने देश के युवाओं को बेरोज़गारी के ‘अग्निपथ’ पर चलने के लिए मजबूर किया है।
— Rahul Gandhi (@RahulGandhi) June 19, 2022
8 सालों में, 16 करोड़ नौकरियां देनी थीं मगर युवाओं को मिला सिर्फ़ पकोड़े तलने का ज्ञान।
देश की इस हालत के ज़िम्मेदार केवल प्रधानमंत्री हैं।
Next Story