Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಂಡನ್‌ ಕಾಲೇಜಿನ ವಿಚಾರ ಸಂಕಿರಣದಲ್ಲಿ...

ಲಂಡನ್‌ ಕಾಲೇಜಿನ ವಿಚಾರ ಸಂಕಿರಣದಲ್ಲಿ ಬಾಬರಿ ತೀರ್ಪು, ಹಿಜಾಬ್‌, ಬುಲ್ಡೋಝರ್‌ ಬಗ್ಗೆ ನ್ಯಾ. ಚಂದ್ರಚೂಡ್‌ಗೆ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ21 Jun 2022 8:44 PM IST
share
ಲಂಡನ್‌ ಕಾಲೇಜಿನ ವಿಚಾರ ಸಂಕಿರಣದಲ್ಲಿ ಬಾಬರಿ ತೀರ್ಪು, ಹಿಜಾಬ್‌, ಬುಲ್ಡೋಝರ್‌ ಬಗ್ಗೆ ನ್ಯಾ. ಚಂದ್ರಚೂಡ್‌ಗೆ ಪ್ರಶ್ನೆ

ಹೊಸದಿಲ್ಲಿ: ಸೋಮವಾರ ಲಂಡನ್‌ನ ಕಿಂಗ್ಸ್ ಕಾಲೇಜಿನಲ್ಲಿ ನಡೆದ ‘ಮಾನವ ಹಕ್ಕುಗಳ ರಕ್ಷಣೆ ಮತ್ತು ನಾಗರಿಕ ಸ್ವಾತಂತ್ರ್ಯಗಳನ್ನು ಕಾಪಾಡುವುದು: ಪ್ರಜಾಪ್ರಭುತ್ವದಲ್ಲಿ ನ್ಯಾಯಾಲಯಗಳ ಪಾತ್ರ’ ಕುರಿತ ವಿಚಾರ ಸಂಕಿರಣದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ ಕೆಲವು ಕಠಿಣ ಪ್ರಶ್ನೆಗಳನ್ನು ಕೇಳಲಾಗಿದೆ. ದೇಶದಲ್ಲಿ ಬುಲ್ಡೋಝರ್ ಗಳನ್ನು ಬಳಸಿ ಮನೆಗಳು ಮತ್ತು ಅಂಗಡಿ ಮುಂಗಟ್ಟುಗಳ ಕೆಡವುವಿಕೆ, ಹಿಜಾಬ್ ವಿರೋಧಿ ಅಭಿಯಾನ, ಬಾಬರಿ ಮಸೀದಿ ತೀರ್ಪು ಮತ್ತು ಆರ್ಟಿಕಲ್ 370 ರದ್ದತಿ ಮೊದಲಾದ ವಿಷಯಗಳಿಗೆ ಸಂಬಂಧಿಸಿದ ಪ್ರಶ್ನೆಗಳೊಂದಿಗೆ ಸುಪ್ರೀಂ ಕೋರ್ಟ್ ಮೂಲಕ ಭಾರತದಲ್ಲಿ ಮುಸ್ಲಿಂ ಅಲ್ಪಸಂಖ್ಯಾತರಿಗೆ ನೀಡಿದ ನ್ಯಾಯದ ಬಗ್ಗೆ ಚಂದ್ರಚೂಡ್‌ ಅವರನ್ನು ಪ್ರಶ್ನಿಸಲಾಗಿದೆ

“ಬಹುತೇಕ ಪ್ರಕರಣಗಳು ಪ್ರಸ್ತುತ ನ್ಯಾಯಾಲಯದಲ್ಲಿವೆ, ಅವುಗಳ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಾಗುವುದಿಲ್ಲ” ಎಂಬ ಅಂಶವನ್ನು ಉಲ್ಲೇಖಿಸಿದ ಚಂದ್ರಚೂಡ್, ತಾನು ನ್ಯಾಯಾಧೀಶರಾಗಿರುವುದರಿಂದ ತಮಗೆ ಕೆಲವು ನಿರ್ಬಂಧಗಳಿವೆ ಎಂದು ಹೇಳಿದ್ದಾರೆ. ಬಾಬರಿ ಮಸೀದಿ ಪ್ರಕರಣದಲ್ಲಿ, ಅವರು ತೀರ್ಪು ನೀಡಿದ ಪೀಠದ ಭಾಗವಾಗಿರುವುದರಿಂದ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ, ತೀರ್ಪಿನ ಟೀಕೆ ಸರಿಯಲ್ಲ ಎಂದು ಅವರು ಹೇಳಿದ್ದಾರೆ.

ಮುಸ್ಲಿಂ ಅಥವಾ ಇತರ ಅಲ್ಪಸಂಖ್ಯಾತರೊಂದಿಗಿನ ತಾರತಮ್ಯದ ಪ್ರಕರಣಗಳನ್ನು ನ್ಯಾಯಾಲಯಗಳು ವ್ಯವಹರಿಸುವುದಿಲ್ಲ ಎಂಬ ಗ್ರಹಿಕೆಯು ಅನ್ಯಾಯವಾಗಿದೆ ಎಂದು ಅವರು ಹೇಳಿದ್ದಾರೆ. ಬುಲ್ಡೋಝರ್‌ ಮೂಲಕ ಉರುಳಿಸುವಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ, ಸುಪ್ರೀಂ ಕೋರ್ಟ್‌ ರಜಾಕಾಲದ ಪೀಠವು ಈ ವಿಷಯವನ್ನು ಕೈಗೆತ್ತಿಕೊಂಡಿದೆ ಮತ್ತು ಈ ವಿಷಯದ ಬಗ್ಗೆ ನೋಟಿಸ್ ನೀಡಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಸಾಮಾನ್ಯವಾಗಿ ಸುಪ್ರೀಂ ಕೋರ್ಟ್ ಅನ್ನು ರಕ್ಷಣೆಯ ಮುಂಚೂಣಿಯಲ್ಲಿರುವ ಅಥವಾ ಸಮಾಜದ ಸಂಕೀರ್ಣ ಸಮಸ್ಯೆಗಳನ್ನು ಪರಿಹರಿಸುವ ನಿರ್ಧಾರಗಳಿಗೆ ಒಂದು ತಾಣ ಎಂದು ಭಾವಿಸಲಾಗಿದೆ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಸೆಮಿನಾರ್‌ನಲ್ಲಿ ಹೇಳಿದ್ದಾರೆ. ಸರ್ವೋಚ್ಚ ನ್ಯಾಯಾಲಯವು ಮೂಲಭೂತ ಹಕ್ಕುಗಳನ್ನು ರಕ್ಷಿಸಬೇಕೆಂಬುದು ನಿಜ, ಆದಾಗ್ಯೂ, ವಿಶಾಲ ತಳಹದಿಯ ಒಮ್ಮತದ ಅಗತ್ಯವಿರುವ ಪಾತ್ರಗಳನ್ನು ನ್ಯಾಯಾಲಯವು ಮೀರಬಾರದು ಎಂಬುದನ್ನು ಅರಿತುಕೊಳ್ಳುವುದು ಬಹಳ ಮುಖ್ಯ ಎಂದು ಅವರು ಹೇಳಿದ್ದಾರೆ

ಮಾಧ್ಯಮಗಳನ್ನು ದೂಷಿಸಿದ ಅವರು, ಮಾಧ್ಯಮಗಳು ಅಥವಾ ಸಾಮಾಜಿಕ ಮಾಧ್ಯಮಗಳು ಉನ್ನತ ನ್ಯಾಯಾಲಯ ವ್ಯವಹರಿಸುತ್ತಿರುವ ಪ್ರಕರಣಗಳನ್ನು ಹೈಲೈಟ್ ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ಇದು ಕೇವಲ ಮುಸ್ಲಿಮರಿಗೆ ಸಂಬಂಧಿಸಿದ ಪ್ರಕರಣಗಳಲ್ಲ, ಎಲ್ಲಾ ಅಂಚಿನಲ್ಲಿರುವ ಸಮುದಾಯಗಳಿಗೆ ಮುಖ್ಯವಾದ ಪ್ರಕರಣಗಳು ಎಂದು ಅವರು ಹೇಳಿದ್ದಾರೆ. ಧರ್ಮದ ಸ್ವಾತಂತ್ರ್ಯ ಮತ್ತು ಹಕ್ಕುಗಳ ಪ್ರಕರಣಗಳಲ್ಲಿ, ನ್ಯಾಯಾಲಯವು ಧಾರ್ಮಿಕ ಪಂಗಡ ಮತ್ತು ನ್ಯಾಯಶಾಸ್ತ್ರದ ಹಕ್ಕುಗಳನ್ನು ಎತ್ತಿಹಿಡಿದಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ಅಲ್ಪಸಂಖ್ಯಾತರ ಶಿಕ್ಷಣ ಕೇಂದ್ರಗಳನ್ನು ಸ್ಥಾಪಿಸುವ ಹಕ್ಕುಗಳನ್ನು ನಾವು ಎತ್ತಿ ಹಿಡಿದಿದ್ದೇವೆ ಎಂದು ಅವರು ಹೇಳಿದ್ದಾರೆ.

ಕಿಂಗ್ಸ್ ಕಾಲೇಜಿನಲ್ಲಿ ವೆಬ್‌ನಲ್ಲಿ ಪ್ರಸಾರವಾದ ಸೆಮಿನಾರ್‌ನಲ್ಲಿ ನ್ಯಾಯಮೂರ್ತಿ ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಮಾನವ ಹಕ್ಕುಗಳ ಕುರಿತು ಹಲವು ನಿರ್ಣಾಯಕ ಪ್ರಕರಣಗಳ ಕುರಿತು ಮಾತನಾಡಿದ್ದಾರೆ.

ಸಶಸ್ತ್ರ ಪಡೆಗಳಲ್ಲಿ ಖಾಯಂ ಆಯೋಗಕ್ಕೆ ಮಹಿಳೆಯರಿಗೆ ಸಮಾನ ಅವಕಾಶವನ್ನು ನೀಡಿದೆ. ಮಹಿಳೆಯರು ಕೆಲವು ವೃತ್ತಿಗಳನ್ನು ಮಾಡಲು ಅಸಮರ್ಥರು ಎಂಬ ಚಿಂತನೆಯು ಆಳವಾದ ಪಿತೃಪ್ರಭುತ್ವದ ಮನಸ್ಥಿತಿಯಿಂದ ಹುಟ್ಟಿಕೊಂಡಿದೆ ಎಂದು ಹೇಳಿರುವ ಅವರು ಮಹಿಳೆಯರ ರಕ್ಷಣೆ ಮತ್ತು ತಾರತಮ್ಯ ನಿರ್ಮೂಲನೆಗೆ ಕುರಿತಾಗಿ ಇತ್ತೀಚೆಗೆ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪುಗಳ ಬಗ್ಗೆ ಗಮನ ಸೆಳೆದಿದ್ದಾರೆ.

ಅಲ್ಲದೆ, ಲೈಂಗಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಆಯ್ಕೆ ಮಾಡಿಕೊಂಡ ವಯಸ್ಕ ಲೈಂಗಿಕ ಕಾರ್ಯಕರ್ತರ ರಕ್ಷಣೆಗಾಗಿ ನೀಡಿರುವ ಇತ್ತೀಚಿನ ತೀರ್ಪನ್ನು ಸಹ ಚಂದ್ರಚೂಡ್‌ ಉಲ್ಲೇಖಿಸಿದ್ದಾರೆ.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X