Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೀಸ್ತಾ ಸೆಟಲ್ವಾಡ್ ಬಂಧನ: ಹಲವಾರು...

ತೀಸ್ತಾ ಸೆಟಲ್ವಾಡ್ ಬಂಧನ: ಹಲವಾರು ಸಂಘಟನೆಗಳಿಂದ ಗುಜರಾತ್ ಪೊಲೀಸರು, ಸರ್ವೋಚ್ಚ ನ್ಯಾಯಾಲಯದ ಟೀಕೆ

ವಾರ್ತಾಭಾರತಿವಾರ್ತಾಭಾರತಿ26 Jun 2022 8:51 PM IST
share
ತೀಸ್ತಾ ಸೆಟಲ್ವಾಡ್ ಬಂಧನ: ಹಲವಾರು ಸಂಘಟನೆಗಳಿಂದ ಗುಜರಾತ್ ಪೊಲೀಸರು, ಸರ್ವೋಚ್ಚ ನ್ಯಾಯಾಲಯದ ಟೀಕೆ

ಹೊಸದಿಲ್ಲಿ, ಜೂ.26: 2002ರ ಗೋಧ್ರಾ ದಂಗೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧದ ಪ್ರಕರಣದಲ್ಲಿ ಅರ್ಜಿದಾರರಾಗಿದ್ದ ಝಾಕಿಯಾ ಜಾಫ್ರಿಯವರ ಬೆಂಬಲಕ್ಕೆ ನಿಂತಿದ್ದ ಖ್ಯಾತ ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರನ್ನು ಬಂಧಿಸಿದ್ದಕ್ಕಾಗಿ ಹಲವಾರು ಮಾನವ ಹಕ್ಕುಗಳ ಸಂಘಟನೆಗಳು ಮತ್ತು ವಕೀಲರು ಗುಜರಾತ ಪೊಲೀಸರು ಮತ್ತು ಸರ್ವೋಚ್ಚ ನ್ಯಾಯಾಲಯವನ್ನು ಟೀಕಿಸಿದ್ದಾರೆ.

ಸೆಟಲ್ವಾಡ್ ಬಂಧನವನ್ನು ಖಂಡಿಸಿ ಶನಿವಾರ ಹೇಳಿಕೆಯನ್ನು ಹೊರಡಿಸಿರುವ ಆಮ್ನೆಸ್ಟಿ ಇಂಟರ್‌ನ್ಯಾಷನಲ್ ಇಂಡಿಯಾ,‘ಭಾರತೀಯ ಅಧಿಕಾರಿಗಳು ಸೆಟಲ್ವಾಡ್‌ರನ್ನು ಬಂಧಿಸಿರುವುದು ತಮ್ಮ ಮಾನವ ಹಕ್ಕುಗಳ ದಾಖಲೆಯನ್ನು ಪ್ರಶ್ನಿಸುವವರ ವಿರುದ್ಧದ ನೇರ ಪ್ರತೀಕಾರ ಕ್ರಮವಾಗಿದೆ. ಇದು ನಾಗರಿಕ ಸಮಾಜಕ್ಕೆ ಬೆದರಿಕೆಯ ಸಂದೇಶವನ್ನು ರವಾನಿಸಿದೆ ಮತ್ತು ದೇಶದಲ್ಲಿ ಭಿನ್ನಾಭಿಪ್ರಾಯಕ್ಕೆ ಅವಕಾಶವನ್ನು ಇನ್ನಷ್ಟು ಕುಗ್ಗಿಸಿದೆ. ಮಾನವ ಹಕ್ಕುಗಳ ಕಾರ್ಯಕರ್ತರನ್ನು ಅವರ ಶಾಸನಬದ್ಧ ಮಾನವ ಹಕ್ಕುಗಳ ಕೆಲಸಕ್ಕಾಗಿ ಗುರಿಯಾಗಿಸಿಕೊಳ್ಳುವುದು ಸ್ವೀಕಾರಾರ್ಹವಲ್ಲ. ಭಾರತೀಯ ಅಧಿಕಾರಿಗಳು ಸೆಟ್ಲವಾಡ್‌ರನ್ನು ತಕ್ಷಣ ಬಿಡುಗಡೆಗೊಳಿಸಬೇಕು ಮತ್ತು ಭಾರತೀಯ ನಾಗರಿಕ ಸಮಾಜ ಹಾಗೂ ಮಾನವ ಹಕ್ಕುಗಳ ಸಮರ್ಥಕರಿಗೆ ಕಿರುಕುಳವನ್ನು ನಿಲ್ಲಿಸಬೇಕು’ ಎಂದು ಹೇಳಿದೆ.

ಗುಜರಾತ ಎಟಿಎಸ್‌ನಿಂದ ಸೆಟಲ್ವಾಡ್ ಬಂಧನವನ್ನು ಖಂಡಿಸಿರುವ ಅಖಿಲ ಭಾರತ ಪ್ರಜಾಸತ್ತಾತ್ಮಕ ಮಹಿಳೆಯರ ಸಂಘ (ಎಐಡಿಡಬ್ಲುಎ)ವು,‘ಗುಜರಾತ ಹತ್ಯಾಕಾಂಡದಲ್ಲಿ ಕ್ರೂರವಾಗಿ ಕೊಲ್ಲಲ್ಪಟ್ಟ ಎಹ್ಸಾನ್ ಜಾಫ್ರಿಯವರ ಪತ್ನಿ ಝಕಿಯಾ ಜಾಫ್ರಿ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿರುವ ಸರ್ವೋಚ್ಚ ನ್ಯಾಯಾಲಯದ ದುರದೃಷ್ಟಕರ ನಿರ್ಧಾರದ ಬೆನ್ನಲ್ಲೇ ಗುಜರಾತ ಪೊಲಿಸರು ಜಾಫ್ರಿಯವರ ಬೆಂಬಲಕ್ಕೆ ಬಂಡೆಯಂತೆ ನಿಂತಿದ್ದ ಸೆಟಲ್ವಾಡ್ ರನ್ನು ಬಂಧಿಸಿದ್ದಾರೆ. ಇದಕ್ಕಾಗಿ ಮತ್ತು ಅವರ ಅನುಕರಣೀಯ ಧೈರ್ಯದ ಇತರ ಕಾರ್ಯಗಳಿಗಾಗಿ ಅವರನ್ನು ಬಲಿಪಶು ಮಾಡಲಾಗಿದೆ ’ಎಂದು ಹೇಳಿದೆ. ಅವರ ವಿರುದ್ಧದ ಪ್ರಕರಣವನ್ನು ತಕ್ಷಣ ಹಿಂದೆಗೆದುಕೊಳ್ಳಬೇಕು ಮತ್ತು ಕಿರುಕುಳವನ್ನು ನಿಲ್ಲಿಸಬೇಕು ಎಂದು ಅದು ಆಗ್ರಹಿಸಿದೆ.

‘ಭಾರತಕ್ಕೆ ಝಕಿಯಾ ಜಾಫ್ರಿಯವರ ಧೈರ್ಯ ಮತ್ತು ಸ್ಥೈರ್ಯವನ್ನು ಹೊಂದಿರುವ ಹೆಚ್ಚಿನ ಪ್ರಜೆಗಳ ಮತ್ತು ಸೆಟ್ಲ್‌ವಾಡ್ ಅವರಂತಹ ಇನ್ನಷ್ಟು ಮಾನವ ಹಕ್ಕುಗಳ ಹೋರಾಟಗಾರರ ಅಗತ್ಯವಿದೆ. ನಾವು ಅವರ ಜೊತೆಯಲ್ಲಿದ್ದೇವೆ ’ಎಂದು ಲೆಫ್ಟ್‌ವರ್ಡ್ ಬುಕ್ಸ್ ಹೇಳಿಕೆಯಲ್ಲಿ ತಿಳಿಸಿದೆ.

ಪ್ರತ್ಯೇಕವಾಗಿ ಹಲವಾರು ವಕೀಲರು ಸಹ, ಝಕಿಯಾ ಜಾಫ್ರಿಯವರ ಅರ್ಜಿಯನ್ನು ವಜಾಗೊಳಿಸುವಾಗ ಪ್ರಕ್ರಿಯೆಯ ಇಂತಹ ದುರುಪಯೋಗದಲ್ಲಿ ಪಾಲ್ಗೊಂಡಿರುವ ಎಲ್ಲರ ವಿರುದ್ಧ ಕಾನೂನು ಕ್ರಮವನ್ನು ಜರುಗಿಸುವ ಅಗತ್ಯವಿದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯವನ್ನು ಖಂಡಿಸಿದ್ದಾರೆ.

‘ಜಾಗತಿಕ ನ್ಯಾಯಶಾಸ್ತ್ರಕ್ಕೆ ಭಾರತೀಯ ಸರ್ವೋಚ್ಚ ನ್ಯಾಯಾಲಯದ ಕೊಡುಗೆಯೆಂದರೆ ವ್ಯಕ್ತಿಯನ್ನು ಬಂಧಿಸುವಂತೆ ಸರಕಾರಕ್ಕೆ ಸೂಚಿಸುವ ಮೂಲಕ ವ್ಯಕ್ತಿ ವಿರುದ್ಧ ಸರಕಾರ ಪ್ರಕರಣವನ್ನು ಇತ್ಯರ್ಥಗೊಳಿಸುವುದು. ಇದೊಂದು ಗಮನಾರ್ಹ ಸಾಂವಿಧಾನಿಕ ನವೀನತೆಯಾಗಿದೆ’ ಎಂದು ಸಾಂವಿಧಾನಿಕ ವಕೀಲ ಮತ್ತು ಕಾನೂನು ತಜ್ಞ ಗೌತಮ ಭಾಟಿಯಾ ಟ್ವೀಟಿಸಿದ್ದಾರೆ.

2002ರ ಗುಜರಾತ ದಂಗೆಗಳ ಪ್ರಕರಣದಲ್ಲಿ ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ ಸೇರಿದಂತೆ 64 ಜನರಿಗೆ ವಿಶೇಷ ತನಿಖಾ ತಂಡವು ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಝಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ಸರ್ವೋಚ್ಚ ನ್ಯಾಯಾಲಯವು ವಜಾಗೊಳಿಸಿತ್ತು. ಅದರ ಬೆನ್ನಲ್ಲೇ ಶನಿವಾರ ಗುಜರಾತ ಎಟಿಎಸ್ ಸೆಟ್ಲವಾಡ್‌ರನ್ನು ಮುಂಬೈನ ಅವರ ನಿವಾಸದಿಂದ ವಶಕ್ಕೆ ತೆಗೆದುಕೊಂಡು ಅಹ್ಮದಾಬಾದ್‌ಗೆ ಕರೆದೊಯ್ದಿತ್ತು. ರವಿವಾರ ಸೆಟ್ಲವಾಡ್‌ರನ್ನು ನ್ಯಾಯಾಲಯದಲ್ಲಿ ಹಾಜರುಪಡಿಸುವ ಮುನ್ನ ಅಹ್ಮದಾಬಾದ್‌ನ ಎಸ್‌ವಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಗೊಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿದವು. ಗುಜರಾತಿನ ಇಬ್ಬರು ಐಪಿಎಸ್ ಅಧಿಕಾರಿಗಳಾದ ಸಂಜೀವ ಭಟ್ ಮತ್ತು ಆರ್.ಬಿ.ಶ್ರೀಕುಮಾರ ಅವರು ಸೆಟ್ಲವಾಡ್ ಅವರೊಂದಿಗೆ ಆರೋಪಿಗಳಾಗಿದ್ದಾರೆ. ಬೇರೊಂದು ಪ್ರಕರಣದಲ್ಲಿ ಭಟ್ ಈಗಾಗಲೇ ಜೈಲಿನಲ್ಲಿದ್ದರೆ ಶ್ರೀಕುಮಾರ ಅವರನ್ನು ಶನಿವಾರ ಗಾಂಧಿನಗರದ ಅವರ ನಿವಾಸದಿಂದ ಬಂಧಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X