ಜು.4ರಂದು ಏಕನಾಥ ಶಿಂದೆ ಸರಕಾರದಿಂದ ವಿಶ್ವಾಸಮತ ಯಾಚನೆ
ಮುಂಬೈ,ಜು.1: ಮಹಾರಾಷ್ಟ್ರದಲ್ಲಿ ಏಕನಾಥ ಶಿಂಧೆ ನೇತೃತ್ವದ ಸರಕಾರವು ಜುಲೈ 4ರಂದು ವಿಶ್ವಾಸಮತ ಯಾಚಿಸಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಅಸೆಂಬ್ಲಿ ಸ್ಪೀಕರ್ ಸ್ಥಾನಕ್ಕೆ ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆಂದು ಅವು ಹೇಳಿವೆ. ಮಹಾರಾಷ್ಟ್ರ ವಿಧಾನಸಭೆಯ ಎರಡು ದಿನಗಳ ವಿಶೇಷ ಅಧಿವೇಶನ ಜುಲೈ 3ರಂದು ಆರಂಭಗೊಳ್ಳಲಿದ್ದು, ಅಗತ್ಯ ಬಿದ್ದಲ್ಲಿ ಸ್ಪೀಕರ್ ಹುದ್ದೆಗೆ ಜುಲೈ 3ರಂದು ಚುನಾವಣೆ ನಡೆಯಲಿದೆ.
ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ಆಗಿದ್ದ ನಾನಾ ಪಟೋಲೆ ಅವರು ಕಳೆದ ವರ್ಷದ ಫೆಬ್ರವರಿಯಲ್ಲಿ ರಾಜೀನಾಮೆ ನೀಡಿದ ಬಳಿಕ ಆ ಸ್ಥಾನ ಖಾಲಿ ಬಿದ್ದಿತ್ತು. ಜುಲೈ 4ರಂದು ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ವಿಶ್ವಾಸಮತ ಕೋರುವ ನಿರ್ಣಯವನ್ನು ಮಂಡಿಸಲಿದ್ದಾರೆ ಎಂದು ವಿಧಾನಭವನ ಮುಖ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Next Story