ನಾಗರಿಕ ಹಕ್ಕುಗಳ ಹೋರಾಟಗಾರ ಗೌತಮ್ ನವ್ಲಾಖಾಗೆ ಜೈಲಿನಲ್ಲಿ ಸೊಳ್ಳೆ ಪರದೆ ಬಳಕೆಗೆ ಅನುಮತಿ ನಿರಾಕರಿಸಿದ ನ್ಯಾಯಾಲಯ
Photo:PTI
ಮುಂಬೈ: ಜೈಲಿನಲ್ಲಿ ಸೊಳ್ಳೆ ಪರದೆ ಬಳಸಲು ಅನುಮತಿ ಕೋರಿ ನಾಗರಿಕ ಹಕ್ಕುಗಳ ಹೋರಾಟಗಾರ, ಎಲ್ಗರ್ ಪರಿಷತ್-ಮಾವೋವಾದಿ ನಂಟು ಪ್ರಕರಣದಲ್ಲಿ ಬಂಧನದಲ್ಲಿರುವ ಗೌತಮ್ ನವ್ಲಾಖಾ ಹಾಗೂ ಸಾಗರ್ ಗೋರ್ಖೆ ಸಲ್ಲಿಸಿದ್ದ ಮನವಿಯನ್ನು ಇಲ್ಲಿನ ವಿಶೇಷ ಎನ್ಐಎ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ.
ನವ್ಲಾಖಾ, ಗೋರ್ಖೆ ಹಾಗೂ ಪ್ರಕರಣದ ಇತರ ಆರೋಪಿಗಳು ಪ್ರಸ್ತುತ ನೆರೆಯ ನವಿ ಮುಂಬೈನ ತಲೋಜಾ ಜೈಲಿನಲ್ಲಿದ್ದಾರೆ.
ತಮ್ಮ ಸೊಳ್ಳೆ ಪರದೆಗಳನ್ನು ಜೈಲು ಅಧಿಕಾರಿಗಳು ತೆಗೆದುಕೊಂಡು ಹೋದ ನಂತರ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.
ಕೈದಿಗಳಿಗೆ ಸೊಳ್ಳೆ ಪರದೆಗಳನ್ನು ಬಳಸಲು ಅವಕಾಶ ನೀಡುವುದು ಅಪಾಯಕಾರಿ ಎಂದು ಜೈಲು ಅಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದರು, ಏಕೆಂದರೆ ಇದರಿಂದ ಒಬ್ಬ ವ್ಯಕ್ತಿಯು ತನ್ನ ಅಥವಾ ಇತರರನ್ನು ಕತ್ತು ಹಿಸುಕಲು ಬಳಸಬಹುದು.
ವಿಶೇಷ ನ್ಯಾಯಾಧೀಶ ರಾಜೇಶ್ ಕಟಾರಿಯಾ ಅವರು ಆರೋಪಿಗಳ ಮನವಿಯನ್ನು ತಿರಸ್ಕರಿಸಿದರು, ಆದರೆ ಸೊಳ್ಳೆ ನಿವಾರಕಗಳು, ಮುಲಾಮುಗಳು ಹಾಗೂ ಅಗರಬತ್ತಿಗಳನ್ನು ಬಳಸಲು ಅವಕಾಶ ನೀಡಿದರು.
ಅನಗತ್ಯ ಗಿಡಗಳ ಕಳೆ ಕಿತ್ತುವುದು ಸೇರಿದಂತೆ ಸೊಳ್ಳೆಗಳನ್ನು ದೂರವಿಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜೈಲು ಅಧೀಕ್ಷಕರಿಗೆ ನ್ಯಾಯಾಧೀಶರು ಸೂಚಿಸಿದರು.
ನವ್ಲಾಖಾ ಹಾಗೂ ಇತರ ಆರೋಪಿಗಳ ವಿರುದ್ಧದ ಪ್ರಕರಣವು ಡಿಸೆಂಬರ್ 31, 2017 ರಂದು ಪುಣೆಯಲ್ಲಿ ನಡೆದ ಎಲ್ಗರ್ ಪರಿಷತ್ ಸಮಾವೇಶಕ್ಕೆ ಸಂಬಂಧಿಸಿದ್ದಾಗಿದೆ. ಈ ಕಾರ್ಯಕ್ರಮಕ್ಕೆ ಮಾವೋವಾದಿಗಳ ನಿಧಿ ಬಳಸಲಾಗಿತ್ತು ಎಂದು ಪೊಲೀಸರು ಆರೋಪಿಸಿದ್ದರು.